Select Your Language

Notifications

webdunia
webdunia
webdunia
webdunia

ರಾಜ್ಯ ಬಜೆಟ್ನಲ್ಲಿ ಬಂಪರ್ ಕೊಡುಗೆ ಸುಳಿವು ನೀಡಿದ ಸಚಿವ ಸುಧಾಕರ್

ರಾಜ್ಯ ಬಜೆಟ್ನಲ್ಲಿ ಬಂಪರ್ ಕೊಡುಗೆ ಸುಳಿವು ನೀಡಿದ ಸಚಿವ ಸುಧಾಕರ್
ಚಿಕ್ಕಬಳ್ಳಾಪುರ , ಗುರುವಾರ, 9 ಫೆಬ್ರವರಿ 2023 (14:30 IST)
ಚಿಕ್ಕಬಳ್ಳಾಪುರ : ರಾಜ್ಯ ಬಜೆಟ್ನಲ್ಲಿ ಚಿಕ್ಕಬಳ್ಳಾಪುರಕ್ಕೆ ಬಂಪರ್ ಕೊಡುಗೆ ನೀಡುವುದಾಗಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸುಳಿವು ನೀಡಿದರು.

ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಲಿರುವ ರಾಜ್ಯ ಬಜೆಟ್ನಲ್ಲಿ ನೀರಾವರಿಗೆ ವಿಶೇಷ ಕೊಡುಗೆ ನೀಡಬೇಕು.

ಜೊತೆಗೆ ರೈತರು, ವಿದ್ಯಾರ್ಥಿಗಳು ಮತ್ತು ಮಹಿಳೆಯರಿಗೆ ಪೂರಕವಾದ ವಿಶೇಷ ಯೋಜನೆಗಳು ಇರಲಿವೆ ಎಂದು ತಿಳಿಸಿದರು. ಇದೇ ತಿಂಗಳು 17ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್ನಲ್ಲಿ ಚಿಕ್ಕಬಳ್ಳಾಪುರಕ್ಕೆ ಭರಪೂರ ಕೊಡುಗೆಗಳ ಸುಳಿವನ್ನು ಸಚಿವ ಸುಧಾಕರ್ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೊಮ್ಮೆ ಬಿಜೆಪಿ ಸರ್ಕಾರ ನಿಶ್ಚಿತ : ಯಡಿಯೂರಪ್ಪ