Select Your Language

Notifications

webdunia
webdunia
webdunia
webdunia

ಲಾಕ್ ಡೌನ್ ಸುಳಿವು ನೀಡಿದ ಸಚಿವ ಸುಧಾಕರ್

ಲಾಕ್ ಡೌನ್ ಸುಳಿವು ನೀಡಿದ ಸಚಿವ ಸುಧಾಕರ್
ಬೆಂಗಳೂರು , ಸೋಮವಾರ, 26 ಏಪ್ರಿಲ್ 2021 (11:15 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ 2ನೇ ಅಲೆ ಅಬ್ಬರ ಜೋರಾಗಿದೆ. ಹಲವರು ಲಾಕ್ ಡೌನ್ ಮಾಡುವಂತೆ ಸಲಹೆ ನೀಡಿದ್ದಾರೆ ಹಾಗಾಗಿ ಇದೀಗ  ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಲಾಕ್ ಡೌನ್ ಸುಳಿವು ನೀಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್ ಅವರು, ಕಠಿಣ ಕ್ರಮಗಳ ಬಗ್ಗೆ ಇಂದೇ ನಿರ್ಧಾರ ಮಾಡಲಾಗುವುದು. ಕೊರೊನಾ 2 ನೇ ಅಲೆ ನಿರೀಕ್ಷೆಗೂ ಮೀರಿ ಏರಿಕೆಯಾಗುತ್ತಿದೆ. ಬೆಂಗಳೂರು ಸೇರಿ ಉಳಿದೆಡೆಯೂ ಸೋಂಕು ಏರಿಕೆಯಾಗುತ್ತಿದೆ ಎಂದು ಹೇಳಿದ್ದಾರೆ.

ಕ್ಯಾಬಿನೆಟ್ ನಲ್ಲಿಂದು ಈ ಬಗ್ಗೆ ಗಂಭೀರ ಚರ್ಚೆ ನಡೆಸಲಾಗುವುದು. ಇಡೀ ವಾರ ವೀಕೆಂಡ್ ಮಾದರಿ ಕರ್ಪ್ಯೂ ಬಗ್ಗೆ ಚರ್ಚೆ ಮಾಡಲಾಗುವುದು. ಸಭೆಯಲ್ಲಿ ಸಚಿವರ ಅಭಿಪ್ರಾಯ ಪಡೆದು ನಿರ್ಧಾರ ಮಾಢಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಲಾಕ್ ಬಗ್ಗೆ ಸುಳಿವು ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಲಾಕ್ ಡೌನ್ ಮಾಡುವಂತೆ ಸರ್ಕಾರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಬಿಬಿಎಂಪಿ ಕಮಿಷನರ್ ನಿಂದ ಸಲಹೆ