Webdunia - Bharat's app for daily news and videos

Install App

ಕುಂದಾಪುರದ ಹೆಸ್ಕುತ್ತೂರು ಹೈಸ್ಕೂಲ್ ಹೆಡ್ ಮಾಸ್ಟರ್ ಗೆ ಅಭಿನಂದಿಸಿದ ಸಚಿವ ಸುರೇಶ್ ಕುಮಾರ್

Webdunia
ಬುಧವಾರ, 10 ಜೂನ್ 2020 (09:16 IST)
Normal 0 false false false EN-US X-NONE X-NONE MicrosoftInternetExplorer4

ಕುಂದಾಪುರ: ಸಚಿವ ಸುರೇಶ್ ಕುಮಾರ್ ಅವರು ಕುಂದಾಪುರ ಹೆಸ್ಕುತ್ತೂರು ಸರಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯಶಿಕ್ಷಕರಾದ ಬಾಬು ಶೆಟ್ಟಿ ಅವರ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮೆಚ್ಚುಗೆಯ ನುಡಿಗಳನ್ನು ಬರೆದುಕೊಂಡಿದ್ದಾರೆ.

 

'ಉಡುಪಿಯಲ್ಲಿ SSLC ಪರೀಕ್ಷೆಗಳ ಸಿದ್ಧತೆಯ ಪರಿಶೀಲನಾ ಸಭೆ ನಡೆಸುತ್ತಿದ್ದಾಗ ಮಹನೀಯರ ಪರಿಚಯವಾಯಿತು. ಇವರ ಹೆಸರು ಶ್ರೀ # ಬಾಬು_ಶೆಟ್ಟಿ.
 

ಕುಂದಾಪುರ ವಲಯದ ಹೆಸ್ಕುತ್ತೂರು ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತನ್ನ ಶಾಲೆಯ SSLC ತರಗತಿಯ ನಲವತ್ತಮೂರು ಮಕ್ಕಳ ಮನೆಗೆ ತಾನೇ ತೆರಳಿ ಅವರಿಗೆ ಪಾಠ ಹೇಳಿ, ತಿಳಿಯದ ಸಂಗತಿಗಳ ಕುರಿತು ಮತ್ತೆ ಮತ್ತೆ ತಿಳುವಳಿಕೆ ನೀಡುತ್ತಿರುವ ಮಹನೀಯ.
 

ತನ್ನ ಶಾಲೆಯಲ್ಲಿ ಕಡುಬಡವ ವಿದ್ಯಾರ್ಥಿಗಳ ಮನೆಗೂ ಹೋಗಿ ತನ್ನ ಕಾಯಕ ಮಾಡುತ್ತಿರುವ ಪುಣ್ಯಾತ್ಮನಿಗೆ ಫೋನ್ ಮಾಡಿ ಅಭಿನಂದಿಸಿದೆ.
 

ಕಳೆದ 23 ವರ್ಷಗಳಿಂದ ತನ್ನ ತರಗತಿಯ ಮಕ್ಕಳು ನೂರಕ್ಕೆ ನೂರು ತೇರ್ಗಡೆಯಾಗುತ್ತಿರುವ ಸಂಗತಿಯನ್ನು ಬಹಳ ಹೆಮ್ಮೆಯಿಂದ, ಆದರೆ ವಿನೀತನಾಗಿ ಹಂಚಿಕೊಂಡರು. ಬಾಬು ಶೆಟ್ಟಿಯವರಂತಹ ಶಿಕ್ಷಕರೇ ನಮ್ಮ ಶಾಲೆಗಳ ವಿಶ್ವಾಸಾರ್ಹತೆ ಹೆಚ್ಚಿಸುತ್ತಿರುವವರು'. ಎಂದು ಸಚಿವ ಸುರೇಶ್ ಕುಮಾರ್ ಅವರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದಿದ್ದಾರೆ

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

Mysore: ಮೈಸೂರು ಪ್ರವಾಸ ಮಾಡುವವರಿಗೆ ಶಾಕ್ ಕೊಟ್ಟ ಎಂಟ್ರಿ ಫೀಸ್

Air India Plane crash: ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ವಿಮಾನ ದುರಂತಗಳು ಯಾವುವು ಗೊತ್ತಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

ಮುಂದಿನ ಸುದ್ದಿ
Show comments