Select Your Language

Notifications

webdunia
webdunia
webdunia
webdunia

ನಾಳೆ ಸಚಿವರೊಬ್ಬರ ಬಂಡವಾಳ ಬಯಲು

ನಾಳೆ ಸಚಿವರೊಬ್ಬರ ಬಂಡವಾಳ ಬಯಲು
ಬೆಂಗಳೂರು , ಬುಧವಾರ, 21 ಸೆಪ್ಟಂಬರ್ 2022 (16:38 IST)
ಕಲಬುರಗಿ ನಗರದ ವಿಮಾನ ನಿಲ್ದಾಣದಲ್ಲಿ ಈ ಕುರಿತು ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಎಚ್​ಡಿಕೆ, ಯಾವ ಸಚಿವರು, ಯಾವ ಅಕ್ರಮ ಎಂಬುದೆಲ್ಲವನ್ನೂ ನಾಳೆ ಸದನದಲ್ಲಿ ಬಹಿರಂಗ ಮಾಡುವೆ.
ನಾನು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಲ್ಲ, ಹಿಟ್ ಆಯಂಡ್ ರನ್ ಅಲ್ಲ. ನನ್ನ ಬಗ್ಗೆ ಹಗುರವಾಗಿ ಮತ್ತು ಏಕವಚನದಲ್ಲಿ ಮಾತನಾಡಿರುವ ಆ ಸಚಿವರಿಗೆ ಇದು ನಮ್ಮ ಸ್ಯಾಂಪಲ್‌. ಮುಂದಿನ ದಿನಗಳಲ್ಲಿ ಇನ್ನೂ ಕೆಲವು ದಾಖಲೆಗಳನ್ನು ಬಿಡುಗಡೆ ಮಾಡುವೆ ಎಂದರು.
 
ಸಚಿವರೊಬ್ಬರು ನಿಯಮ ಉಲ್ಲಂಘಿಸಿ, ಅಧಿಕಾರ ದುರುಪಯೋಗ ಮಾಡಿಕೊಂಡು ಮಾಡಿರುವ ಅಕ್ರಮವನ್ನು ದಾಖಲೆ ಸಮೇತ ಬಯಲಿಗೆ ಎಳೆಯುವೆ ಎಂದು ಕುಮಾರಸ್ವಾಮಿ ಬಾಂಬ್ ಸಿಡಿಸಿದರು. ಇವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಿಜಬ್ ವಿರೋಧಿಸಿ ಇರಾನ್ನಲ್ಲಿ ಭುಗಿಲೆದ್ದ ಪ್ರತಿಭಟನೆ