Webdunia - Bharat's app for daily news and videos

Install App

ಅಯ್ಯಪ್ಪ ಮಾಲಾಧಾರಿಗಳಿಗೆ ಆಪತ್ಬಾಂಧವರಾದ ಸಚಿವ ಖಾದರ್!

Webdunia
ಶನಿವಾರ, 14 ಜನವರಿ 2017 (11:19 IST)
ಶಬರಿಮಲೆಯಿಂದ ಹಿಂದಿರುಗುತ್ತಿದ್ದ ಭಕ್ತರ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಶಕ್ರವಾರ ನಡೆದಿದ್ದು, ಈ ವೇಳೆ ಭಕ್ತರು ಅಸಹಾಯಕರಾಗಿ ನಿಂತಿದ್ದ ಸಂದರ್ಭದಲ್ಲಿ ಆಹಾರ ಮತ್ತ ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಭಕ್ತರಿಗೆ ಸಹಾಯ ಮಾಡಿ ರಕ್ಷಣೆ ಮಾಡಿದ್ದಾರೆ. 
 
ಅಯ್ಯಪ್ಪ ಮಾಲಾಧಾರಿಗಳು ಧಾರವಾಡ ಜಿಲ್ಲೆಯವರಾಗಿದ್ದು, ಇಂಡಿಕಾ ಕಾರಿನಲ್ಲಿ ಶಬರಿಮಲೆಗೆ ತೆರಳಿದ್ದರು. ನಂತರ ಅಲ್ಲಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಈ ವೇಳೆ ಅವರು ಸಂಚರಿಸುತ್ತಿದ್ದ ಕಾರಿನಲ್ಲಿ ದಿಢೀರ ಬೆಂಕಿ ಕಾಣಿಸಿದ್ದು, ನೋಡುತ್ತಿದ್ದಂತೆ ಬೆಂಕಿ ತೀವ್ರವಾಗತೊಡಗಿತ್ತು.
 
ಈ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಸಚಿವ ಯು.ಟಿ.ಖಾದರ್ ಸಂಚರಿಸುತ್ತಿದ್ದು, ಘಟನೆಯನ್ನು ಕಂಡು ತಮ್ಮ ವಾಹನ ನಿಲ್ಲಿಸಿ, ಉರಿಯುತ್ತಿರುವ ಕಾರಿನತ್ತ ಧಾವಿಸಿದರು. ತಕ್ಷಣವೇ ಶಬರಿಮಲೆ ಭಕ್ತರ ಕಾರಿನ ಬೆಂಕಿ ನಂದಿಸಲು ತಮ್ಮ ಕಾರಿನಲ್ಲಿದ್ದ ಅಲ್ಪಸ್ವಲ್ಪ ನೀರನ್ನು ಹಾಗೂ ಸ್ಥಳದಲ್ಲಿದ್ದ ಮಣ್ಣು ಕೈಯಿಂದಲೇ ಬೆಂಕಿ ಮೇಲೆ ಹಾಕಿ ನಂದಿಸಲು ಪ್ರಯತ್ನಿಸಿದರು. ಬಳಿಕ ಅಗ್ನಿಶಾಮಕ ವಾಹನ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. 
 
ಅದಲ್ಲದೆ, ಅಯ್ಯಪ್ಪ ಮಾಲಾಧಾರಿಗಳಿಗೆ ಊಟೋಪಚಾರದ ವ್ಯವಸ್ಥೆ ಕಲ್ಪಿಸಿ, ಹಬ್ಬಳ್ಳಿಗೆ ಹಿಂದಿರುಗಲ ಹಣಕಾಸು ನೆರವನ್ನು ಸಚಿವ ನೀಡಿ ಖಾದರ್ ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments