Select Your Language

Notifications

webdunia
webdunia
webdunia
webdunia

ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ ಸಚಿವ ವೆಂಕಟರಮಣಪ್ಪ. ಕಾರಣವೇನು ಗೊತ್ತಾ?

ರಾಜೀನಾಮೆ ನೀಡುವುದಾಗಿ ಎಚ್ಚರಿಕೆ  ನೀಡಿದ  ಸಚಿವ ವೆಂಕಟರಮಣಪ್ಪ. ಕಾರಣವೇನು ಗೊತ್ತಾ?
ಚಿತ್ರದುರ್ಗಾ , ಗುರುವಾರ, 4 ಜುಲೈ 2019 (11:21 IST)
ಚಿತ್ರದುರ್ಗಾ: ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲೇ ಇದೀಗ ಕಾಂಗ್ರೆಸ್ ಸಚಿವರೊಬ್ಬರು ರಾಜೀನಾಮೆ ನೀಡುವುದಾಗಿ ಹೊಸ ಬಾಂಬ್ ಸಿಡಿಸಿದ್ದಾರೆ.




ಆಗಸ್ಟ್ 10ರೊಳಗೆ ವಾಣಿವಿಲಾಸ ಸಾಗರಕ್ಕೆ ನೀರು ಬಿಡದೇ ಇದ್ದರೆ ರಾಜೀನಾಮೆ ನೀಡುವುದಾಗಿ ಕಾರ್ಮಿಕ ಸಚಿವ ವೆಂಕಟರಮಣಪ್ಪ ಎಚ್ಚರಿಕೆ ನೀಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆ ತ್ವರಿತವಾಗಿ ಮುಗಿಸಲು ಆಗ್ರಹಿಸಿ ಹಿರಿಯೂರು ವಕೀಲರ ಸಂಘ ನಿನ್ನೆ ನಡೆಸಿದ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಅವರು ಈ ರೀತಿಯಾಗಿ ಹೇಳಿದ್ದಾರೆ.


ಮುಂದಿನ ತಿಂಗಳು 10ರೊಳಗೆ ವಾಣಿವಿಲಾಸ ಸಾಗರಕ್ಕೆ ನೀರು ಹರಿಸಬೇಕು. ನಾನು ಕೂಡ ರೈತನ ಮಗ. ರೈತರಿಗೆ ಕೊಟ್ಟ ಮಾತು ತಪ್ಪುವುದಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ತ್ವರಿತವಾಗಿ ಮುಗಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಅವರು ಮೈತ್ರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ತವರು ಜಿಲ್ಲೆಯಲ್ಲೇ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ಶಾಕ್