ಸಚಿವ ವೆಂಕಟೇಶ್ ಯಾರ ಓಲೈಕೆಗೆ ಈ ಹೇಳಿಕೆ ನೀಡಿದ್ದಾರೆ : ಬೊಮ್ಮಾಯಿ ಪ್ರಶ್ನೆ

Webdunia
ಸೋಮವಾರ, 5 ಜೂನ್ 2023 (10:52 IST)
ಬೆಂಗಳೂರು : ಸಚಿವ ಕೆ. ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಪಶು ಸಂಗೋಪನಾ ಸಚಿವ ವೆಂಕಟೇಶ್ ಅವರು ಎಮ್ಮೆ, ಕೋಣ ಕಡಿದು ಹಾಕುವುದಾದ್ರೆ ಹಸು ಏಕೆ ಕಡಿಯಬಾರದು ಎಂದು ಪ್ರಶ್ನೆ ಮಾಡಿದ್ದರು. ಈ ಅಭಿಪ್ರಾಯಕ್ಕೆ ಬೊಮ್ಮಾಯಿ ಸರಣಿ ಟ್ವೀಟ್ ಮಾಡಿ ವೆಂಕಟೇಶ್ ಅವರನ್ನು ಕುಟುಕಿದ್ದಾರೆ.

ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದ್ದು, ಅವರ ಹೇಳಿಕೆ ಖಂಡನೀಯ ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ.

ಸಚಿವ ಕೆ. ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ, ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೋ, ಹೈ ಕಮಾಂಡ್ ಮೆಚ್ಚಿಸಲೊ?. ಗೋಹತ್ಯೆ ನಿಷೇಧ ಪ್ರಥಮವಾಗಿ ಪ್ರತಿಪಾದಿಸಿದ್ದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರು. ಪೂಜ್ಯ ಮಹಾತ್ಮಾ ಗಾಂಧಿ ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960 ರ ದಶಕದಲ್ಲಿ ಹಲವಾರು ರಾಜ್ಯಗಳಲ್ಲಿ ಕಾನೂನು ತರಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಮುಂದಿನ ಸುದ್ದಿ
Show comments