Select Your Language

Notifications

webdunia
webdunia
webdunia
webdunia

ಮೂರು ದಿನಗಳಿಂದ ಸಿಎಂ ಸಿದ್ದರಾಮಯ್ಯ ಸಂಪುಟದ ಸಚಿವರು ನಾಪತ್ತೆ!

ಮೂರು ದಿನಗಳಿಂದ ಸಿಎಂ ಸಿದ್ದರಾಮಯ್ಯ ಸಂಪುಟದ ಸಚಿವರು ನಾಪತ್ತೆ!
ಬೆಂಗಳೂರು , ಮಂಗಳವಾರ, 28 ನವೆಂಬರ್ 2017 (09:35 IST)
ಬೆಂಗಳೂರು: ಯೋಗೀಶ್ ಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿಬಂದ ಹಿನ್ನಲೆಯಲ್ಲಿ ವಿಪಕ್ಷಗಳ ಟೀಕೆಗೆ ಗುರಿಯಾಗಿರುವ ಸಚಿವ ವಿನಯ್ ಕುಲಕರ್ಣಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ!
 

ಒಂದೆಡೆ ಬಿಜೆಪಿ ವಿನಯ್ ಕುಲಕರ್ಣಿ ರಾಜೀನಾಮೆಗೆ ಪಟ್ಟು ಹಿಡಿದಿದ್ದರೆ, ಇನ್ನೊಂದೆಡೆ ಸಚಿವರು ವಿನಯ್ ಕುಲಕರ್ಣಿ ಮಾತ್ರ ಯಾರ ಕೈಗೂ ಸಿಗುತ್ತಿಲ್ಲ. ಆದರೆ ಬಿಜೆಪಿ ಪಟ್ಟಿಗೆ ಸೊಪ್ಪು ಹಾಕದ ಸಿಎಂ ಸಿದ್ದರಾಮಯ್ಯ, ವಿನಯ್ ಕುಲಕರ್ಣಿಗೆ ರಾಜೀನಾಮೆ ಕೊಡಬೇಕಾಗಿಲ್ಲ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.

ಹಾಗಿದ್ದರೂ ವಿಪಕ್ಷಗಳ ಒತ್ತಡದ ಹಿನ್ನಲೆಯಲ್ಲಿ ಸಚಿವರು ರಾಜೀನಾಮೆಗೆ ಚಿಂತನೆ ನಡೆಸಿದ್ದಾರೆಯೇ, ಇದಕ್ಕಾಗಿಯೇ ಯಾರ ಕೈಗೂ ಸಿಗದೇ ನಾಪತ್ತೆಯಾಗಿದ್ದಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಈ ಖದೀಮರಿಗೆ ಇಂಗ್ಲಿಷ್ ಸಿನಿಮಾವೇ ಪ್ರೇರಣೆ!