ಕೋವಿಡ್ ಪರಿಹಾರ ಕಾರ್ಯಾಚರಣೆಗೆ 3 ತಿಂಗಳ ವೇತನ ನೀಡಿದ ಸಚಿವ

Webdunia
ಬುಧವಾರ, 1 ಏಪ್ರಿಲ್ 2020 (19:28 IST)
ಕೋವಿಡ್ – 19 ಪರಿಹಾರ ಕಾರ್ಯಾಚರಣೆಗೆ ಕೈಗೊಳ್ಳಲು ಸಿಎಂ ಪರಿಹಾರ ನಿಧಿಗೆ ಸಚಿವರೊಬ್ಬರು ತಮ್ಮ ಮೂರು ತಿಂಗಳ ವೇತನ ನೀಡಿದ್ದಾರೆ.

ಮುಖ್ಯಮಂತ್ರಿಗಳ ಕೋರಿಕೆಯ ಬೆನ್ನಲ್ಲೇ ರಾಜ್ಯದ ಪಶು ಸಂಗೋಪನೆ, ವಕ್ಫ್, ಹಜ್ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ.ಚವ್ಹಾಣ್ ಅವರು ತಮ್ಮ ಮೂರು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವುದಾಗಿ ಘೋಷಿಸಿದ್ದಾರೆ.

ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಕೋರೊನಾ ವೈರಸ್ ನಿಯಂತ್ರಣಕ್ಕಾಗಿ ಎಲ್ಲ ದೇಶಗಳು ಹರಸಾಹಸ ಪಡುತ್ತಿವೆ. ಅನೇಕ ದೇಶಗಳು ಭಾರತದಂತೆಯೇ ತಮ್ಮ ತಮ್ಮ ದೇಶಗಳಲ್ಲಿ ಲಾಕ್‌ಡೌನ್ ಘೋಷಣೆ ಮಾಡಿವೆ. ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಮತ್ತು ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕ್ರಮ ಜರುಗಿಸಲು ಹಾಗೂ ಲಾಕ್‌ಡೌನ್ ನಿಂದ ಅನಾನುಕೂಲ ಉಂಟಾದ ಜನರಿಗೆ ಸಹಾಯ ಮಾಡಲು ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಈಗಾಗಲೇ ಮಹಾಜನತೆಯ ಸಹಕಾರ ಕೋರಿದ್ದಾರೆ. ಅದರಂತೆ ತಾವು ಸಿಎಂ ಅವರ ಪರಿಹಾರ ನಿಧಿಗೆ ವೇತನ ನೀಡುತ್ತಿರುವುದಾಗಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments