Webdunia - Bharat's app for daily news and videos

Install App

ಮುಸ್ಲಿಮರಿಗೆ ಶೇ.4 ಅಲ್ಲ, ಶೇ.10 ರಷ್ಟು ಮೀಸಲಾತಿ ಏರಿಕೆ: ಜಮೀರ್ ಅಹ್ಮದ್ ಸೂಚನೆ

Krishnaveni K
ಗುರುವಾರ, 13 ಮಾರ್ಚ್ 2025 (14:17 IST)
ಬೆಂಗಳೂರು: ಇತ್ತೀಚೆಗೆ ರಾಜ್ಯ ಬಜೆಟ್ ನಲ್ಲಿ ಸರ್ಕಾರೀ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡುವ ವಿಚಾರ ವಿವಾದಕ್ಕೆ ಕಾರಣವಾಗಿತ್ತು. ಆದರೆ ಈಗ ಶೇ.4 ಅಲ್ಲ, ಒಟ್ಟು ಮೀಸಲಾತಿಯನ್ನು ಶೇ.10 ಕ್ಕೆ ಏರಿಕೆ ಮಾಡುವ ಬಗ್ಗೆ ಸಚಿವ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ.

ಮುಸ್ಲಿಮರಿಗೆ ಮೀಸಲಾತಿ ಶೇ.10 ರಷ್ಟು ಏರಿಕೆ ಮಾಡುವಂತೆ ಬಂದ ಮನವಿ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ. ಕೆಲವು ಸಂಘಟನೆಗಳು ಮೀಸಲಾತಿ ಏರಿಕೆ ಮಾಡಲು ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ ಗೆ ಮನವಿ ಸಲ್ಲಿಸಿದ್ದವು.

ಅದರಂತೆ ಈಗ ಜಮೀರ್ ಅಹ್ಮದ್ ಕ್ರಮ ಕೈಗೊಳ್ಳುವಂತೆ ವಿಶೇಷ ಕರ್ತವ್ಯಾಧಿಕಾರಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಮುಸ್ಲಿಮರಿಗೆ ಬಿ ಮೀಸಲಾತಿಯನ್ನು ಶೇ.10 ರಷ್ಟು ಏರಿಕೆ ಮಾಡಲು ಮನವಿ ಸಲ್ಲಿಸಲಾಗಿತ್ತು.

ಈ ಬಾರಿ ಬಜೆಟ್ ನಲ್ಲಿ ಮುಸ್ಲಿಮರಿಗೆ ಸಾಕಷ್ಟು ಕೊಡುಗೆ ನೀಡಲಾಗಿತ್ತು. ಇದು ವಿಪಕ್ಷ ಬಿಜೆಪಿ ಆಕ್ರೋಶಕ್ಕೆ ಕಾರಣವಾಗಿತ್ತು. ಆದರೆ ಈಗ ಮುಸ್ಲಿಮರಿಗೆ ಮತ್ತೊಂದು ಕೊಡುಗೆ ನೀಡಲು ಸರ್ಕಾರ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments