Webdunia - Bharat's app for daily news and videos

Install App

ಸಚಿವ ಜಮೀರ್ ಮನೆಯಲ್ಲಿ ಅಡಗಿದ್ದಾರಾ ಐಎಂಎ ಹಗರಣದ ರೂವಾರಿ ಮನ್ಸೂರ್?

Webdunia
ಶನಿವಾರ, 15 ಜೂನ್ 2019 (19:13 IST)
ಐಎಂಎ ಸಂಸ್ಥೆಯ ಪ್ರಮುಖ ರೂವಾರಿ ಮನ್ಸೂರ್ ಅವರು ಸಚಿವ ಜಮೀರ್ ಅಹಮದ್ ಖಾನ್ ನಿವಾಸದಲ್ಲೇ ಅಡಗಿದ್ದರೂ ಅಚ್ಚರಿಯಿಲ್ಲ. ಹೀಗಂತ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ದೂರಿದ್ದಾರೆ.

ಎನ್.ರವಿಕುಮಾರ್ ಹೇಳಿಕೆ ನೀಡಿದ್ದು, ಐಎಂಎ ಸಂಸ್ಥೆಯ ಪ್ರಮುಖ ರೂವಾರಿ ಮನ್ಸೂರ್ ಅವರು ಸಚಿವ ಜಮೀರ್ ಅಹಮದ್ ನಿವಾಸದಲ್ಲೇ ಅಡಗಿದ್ದರೂ ಅಚ್ಚರಿಯಿಲ್ಲ. ಮೇಲಾಗಿ ಮನ್ಸೂರ್ ಸಾಲ ಪಡೆಯಲು ಸರ್ಕಾರದ ಗ್ಯಾರಂಟಿ ಕೊಡಿಸಲು ಇದೇ ಜಮೀರ್ ಅಹಮದ್ ಪ್ರಯತ್ನಿಸಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಗಾಗಿ ಮೊದಲು ಜಮೀರ್ ಅಹಮದ್ ರನ್ನು ಸಚಿವ ಸಂಪುಟದಿಂದ ವಜಾ ಮಾಡಿ, ಅವರನ್ನು ಬಂಧಿಸಬೇಕು ಎಂದರು. ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದರು.

ಇನ್ನು ಶಾಸಕ ಸಿ.ಟಿ.ರವಿ ಮಾತನಾಡಿ, ಅನಿಯಂತ್ರಿತ ಠೇವಣಿಗಳನ್ನು ಮುಟ್ಡುಗೋಲು ಹಾಕಿಕೊಳ್ಳುವ ಸಂಬಂಧ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ವಿಶೇಷ ಕಾಯ್ದೆಯೊಂದನ್ನು ರೂಪಿಸಿದೆ. ಇದರ ಆಧಾರದ ಮೇಲೆ ಐಎಂಎ ಹಗರಣದ ತನಿಖೆಗೆ ಎಸ್ ಐಟಿ ತನಿಖೆಯೂ ಸಹ ಕಾನೂನು ಬಾಹಿರವಾಗುತ್ತದೆ. ಈ ಕಾಯ್ದೆ ಪ್ರಕಾರ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರ ನೇತೃತ್ವದ ಅರೆನ್ಯಾಯಿಕ ಸಮಿತಿ ರಚನೆ ಮಾಡಿ ಅವರ ಮೂಲಕ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು. ಜತೆಗೆ ಇದೇ ಮನ್ಸೂರ್ ಸಾಲ ಪಡೆಯಲು ಸರ್ಕಾರದ ಶ್ಯೂರಿಟಿ ಹಾಕಿಸಲು ಜಮೀರ್ ಅಹಮದ್ ಪ್ರಯತ್ನಿಸಿದ್ದರು. ಹಾಗಾಗಿ ಮೊದಲು ಜಮೀರ್ ಅಹಮದ್ ಬಂಧನವಾಗಬೇಕು ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments