Select Your Language

Notifications

webdunia
webdunia
webdunia
webdunia

ಸಚಿವ ಸ್ಥಾನ ತೀರ್ಮಾನ ; ಯಡಿಯೂರಪ್ಪಗೆ ಟಾಂಗ್ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ

ಸಚಿವ ಸ್ಥಾನ ತೀರ್ಮಾನ ; ಯಡಿಯೂರಪ್ಪಗೆ ಟಾಂಗ್ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ
ಚಿತ್ರದುರ್ಗ , ಸೋಮವಾರ, 16 ಡಿಸೆಂಬರ್ 2019 (19:00 IST)
ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾ‌ನಮಾನ ಸಿಗಲಿದೆ ಅನ್ನೋದು ಸಿಎಂ ನಿರ್ಧಾರಕ್ಕೆ ಬಿಟ್ಟ ವಿಷಯ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಹೊಸ ಬಾಂಬ್ ಸಿಡಿಸಿದ್ದಾರೆ.

ಯಾರಿಗೆ ಯಾವ ಖಾತೆ ಕೊಡಬೇಕು ಅನ್ನೋದು ಸಿಎಂ ಪರಮೋಚ್ಛ ಅಧಿಕಾರವಾಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ನಿರ್ಧಾರವೇ ಅಂತಿಮವಾಗಿದೆ. ರಾಜ್ಯಾಧ್ಯಕ್ಷರ ಕೈಯಲ್ಲಿಲ್ಲ ಸಚಿವ ಸ್ಥಾನದ ತೀರ್ಮಾನ. ಹೀಗಂತ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
webdunia

ಸಿಎಂ ನಿರ್ಧಾರ ತೆಗೆದುಕೊಂಡ ಬಳಿಕ ಜೊತೆಯಲ್ಲಿ ಚರ್ಚೆ ಮಾಡ್ತಿವಿ. ಹೀಗಂತ ಚಿತ್ರದುರ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಶಾಸಕರು ಸಚಿವ ಸ್ಥಾನಕ್ಕೆ ಲಾಬಿ  ನಡೆಸ್ತಿರೋದಕ್ಕೆ ಪ್ರತಿಕ್ರಿಯಿಸಿ, ಎಲ್ಲರಿಗೂ ಆಸೆ ಇರತ್ತೆ, ಎಲ್ಲ ಜಿಲ್ಲೆಗಳಿಗೂ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದರು.



Share this Story:

Follow Webdunia kannada

ಮುಂದಿನ ಸುದ್ದಿ

ರಾಜನೂ ರಾಣಿಯೂ ಚಿತ್ರಿಕರಣ ಶುರು