Select Your Language

Notifications

webdunia
webdunia
webdunia
webdunia

ಶಿಕ್ಷಣ ಸಚಿವ ತನ್ವೀರ್ ಸೇಠ್ ವಿರುದ್ಧ 30 ಸಚಿವರು, ಶಾಸಕರ ದೂರು

ಶಿಕ್ಷಣ ಸಚಿವ ತನ್ವೀರ್ ಸೇಠ್ ವಿರುದ್ಧ 30 ಸಚಿವರು, ಶಾಸಕರ ದೂರು
ಬೆಂಗಳೂರು , ಮಂಗಳವಾರ, 18 ಜುಲೈ 2017 (09:27 IST)
ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರ ಖಾತೆ ಬದಲಾಯಿಸುವಂತೆ 30ಕ್ಕೂ ಅಧಿಕ ಶಾಸಕರು ಮತ್ತು ಸಚಿವರು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.

ಬಿಇಓಗಳ ವರ್ಗಾವಣೆ ವಿಚಾರದಲ್ಲಿ ತನ್ವೀರ್ ಸೇಠ್ ಯಾರ ಮಾತನ್ನೂ ಕೇಳುತ್ತಿಲ್ಲ. ಹೀಗಾಗಿ, ಅಸಮಾಧಾನ ವ್ಯಕ್ತಪಡಿಸಿರುವ ಶಾಸಕರು ಖಾತೆ ಬದಲಾವಣೆ ಮಾಡುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ. ಸಚಿವರಾದ ರಮಾನಾಥ್ ರೈ, ಎಚ್. ಆಂಜನೇಯ, ಶಾಸಕರಾದ ಸೋಮಶೇಖರ್, ಮುನಿರತ್ನ, ಬೈರತಿ ಬಸವರಾಜ್ ಸೇರಿದಂತೆ ಹಲವು ಶಾಸಕರು ಖಾತೆ ಬದಲಾವಣೆಗೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಸಿಎಂ ಖಾತೆ ಬದಲಾವಣೆಗೆ ಮುಂದಾಗುತ್ತಾರಾ..? ಸಚಿವರು ಮತ್ತು ಶಾಸಕರ ಮಾತಿಗೆ ಮಣಿಯುತ್ತಾರಾ ಎಂಬುದು ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರಪತಿ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸೋಲಬಹುದು: ಪರಮೇಶ್ವರ್