Webdunia - Bharat's app for daily news and videos

Install App

ಕಪ್ಪು ಹಣ ದಂಧೆಯಲ್ಲಿ ರಾಜ್ಯದ ಪ್ರಭಾವಿ ಮಂತ್ರಿಗಳು ಶಾಮೀಲು

Webdunia
ಮಂಗಳವಾರ, 13 ಡಿಸೆಂಬರ್ 2016 (16:20 IST)
ಬ್ಲ್ಯಾಕ್ ಆಂಡ್ ವೈಟ್ ದಂಧೆಯಲ್ಲಿ ರಾಜ್ಯದ ಇಬ್ಬರು ಪ್ರಭಾವಿ ಮಂತ್ರಿಗಳು ಶಾಮೀಲಾಗಿದ್ದಾರೆ ಎಂದು ಗುತ್ತಿಗೆದಾರ ಚಂದ್ರಕಾಂತ್ ರಾಮಲಿಂಗಂ ಸಿಬಿಐ ಹಾಗೂ ಇಡಿ ತನಿಖೆಯಲ್ಲಿ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾನೆ.
ಅಧಿಕಾರಿಗಳಾದ ಟಿ.ಎನ್.ಚಿಕ್ಕರಾಯಪ್ಪ ಹಾಗೂ ಎಸ್.ಸಿ.ಜಯಚಂದ್ರ ಆಕ್ರಮ ಸಂಪತ್ತು ಪ್ರಕರಣದ ತನಿಖೆಯಲ್ಲಿ ಗುತ್ತಿಗೆದಾರ ಚಂದ್ರಕಾಂತ್ ರಾಮಲಿಂಗಂ ಸಾಕಷ್ಟು ಮಾಹಿತಿಗಳನ್ನು ಬಹಿರಂಗ ಪಡಿಸಿದ್ದಾನೆ.
 
ತಮಿಳುನಾಡು ಮೂಲದ ಬೆಂಗಳೂರಿನಲ್ಲಿರುವ ಗುತ್ತಿಗೆದಾರ ಹಾಗೂ ಬ್ಲ್ಯಾಕ್ ಆಂಡ್ ವೈಟ್ ದಂಧೆಯ ಕಿಂಗ್‌ಪಿನ್ ಆಗಿರುವ ಚಂದ್ರಕಾಂತ್ ರಾಮಲಿಂಗಂ ಹಾರ್ಡ್‌ಡಿಸ್ಕ್‌ನಲ್ಲಿರುವ ಹಲವು ಸ್ಫೋಟಕ ಮಾಹಿತಿಗಳು ಬೆಳಕಿಗೆ ಬಂದಿದ್ದು, ಇತ ಕಳೆದ ಮೂರು ವರ್ಷಗಳ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿಟ್ಟಿದ್ದ.
 
ಇತ ರಾಜ್ಯದ ಇಬ್ಬರು ಪ್ರಭಾವಿ ಸಚಿವರು, 4 ಐಎಎಸ್ ಹಾಗೂ 5 ಐಪಿಎಸ್ ಅಧಿಕಾರಿಗಳು ಮತ್ತು ಎಂಟು ಕೆಎಎಸ್ ಅಧಿಕಾರಿಗಳೊಂದಿಗೆ ನಂಟು ಹೊಂದಿದ್ದ ಎಂದು ಹೇಳಲಾಗುತ್ತಿದೆ. ಹಾಗೂ ಕಪ್ಪು ಹಣವನ್ನು ಬಿಳಿ ಹಣವನ್ನಾಗಿಸುವ ಉದ್ದೇಶದಿಂದ ತಮಿಳುನಾಡಿನ ಹಲವು ಅಧಿಕಾರಿಗಳೊಂದಿಗೆ ಕೈಜೋಡಿಸಿರುವುದಾಗಿ ಬಾಯ್ಬಿಟ್ಟಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments