Select Your Language

Notifications

webdunia
webdunia
webdunia
webdunia

ಪಾಲಿ ನಾರಿಮನ್ ಭೇಟಿಯಾದ ಸಚಿವದ್ವಯರು

ಪಾಲಿ ನಾರಿಮನ್
ನವದೆಹಲಿ , ಶನಿವಾರ, 6 ಆಗಸ್ಟ್ 2016 (17:22 IST)
ಮಹದಾಯಿ ನ್ಯಾಯಾಧೀಕರಣದಿಂದ ರಾಜ್ಯಕ್ಕೆ ಹಿನ್ನೆಡೆ ಹಿನ್ನೆಲೆಯಲ್ಲಿ ಇಂದು ಸಚಿವದ್ವಯರು ಕರ್ನಾಟಕ ಪರ ವಕೀಲ ಪಾಲಿ ನಾರಿಮನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತಿದ್ದಾರೆ.
 
ಕಾನೂನು ಸಚಿವ ಟಿ.ಬಿ.ಜಯಚಂದ್ರ ಹಾಗೂ ಬೃಹತ್ ನೀರಾವರಿ ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾನೂನು ಸಲಹೆಗಾರ ಬ್ರಿಜೇಶ್ ಕಾಳಪ್ಪ ಅವರು ನವದೆಹಲಿಯಲ್ಲಿರುವ ನಾರಿಮನ್ ಅವರ ನಿವಾಸಕ್ಕೆ ತೆರಳಿ ಮುಂದಿನ ಕಾನೂನು ಹೋರಾಟದ ರೂಪರೇಷಗಳ ಕುರಿತು ಚರ್ಚೆ ನಡೆಸಿದ್ದಾರೆ.
 
ಮಹದಾಯಿ ನ್ಯಾಯಾಧೀಕರಣದಲ್ಲಿ ಕರ್ನಾಟಕದ ಮಧ್ಯಂತರ ಅರ್ಜಿ ತಿರಸ್ಕಾರವಾದ ಹಿನ್ನೆಲೆಯಲ್ಲಿ ಸುಪ್ರಿಂ ಕೋರ್ಟ್ ಮೋರೆ ಹೋಗುವ ಕುರಿತು ಹಾಗೂ ಮಧ್ಯಂತರ ಅರ್ಜಿ ಪುನರ್‌ಪರಿಶೀಲನೆ ಮಾಡುವುದೋ ಎನ್ನುವ ಕುರಿತು ಚರ್ಚೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರೈತರೇನು ದರೋಡೆಕೋರರಲ್ಲ, ಕೊಲೆಗಡುಕರು ಅಲ್ಲ: ಶಾಸಕ ನಡಹಳ್ಳಿ ಆಕ್ರೋಶ