19 ಅಂಕ ಪಡೆದ ದರ್ಶನ್‌, 29 ಅಂಕ ಪಡೆದ ನಾಗೇಶ್‌ ಪಾಸಾಗಿದ್ದು ಹೇಗೆ: ಸಿದ್ದರಾಮಯ್ಯ

Webdunia
ಬುಧವಾರ, 4 ಮೇ 2022 (14:14 IST)
ಪಿಎಸ್‌ ಐ ಪರೀಕ್ಷಾ ಅಕ್ರಮದಲ್ಲಿ ಐಟಿ ಬಿಟಿ ಸಚಿವ ಅಶ್ವಥ್‌ ನಾರಾಯಣ್‌ ಕೈವಾಡ ಇರುವುದು ಸ್ಪಷ್ಟವಾಗಿದೆ. ಅವರ ಸಂಬಂಧಿಕರಾದ ದರ್ಶನ್‌ ಗೌಡ ಮತ್ತು ನಾಗೇಶ್‌ ಗೌಡ ಪರೀಕ್ಷಾ ಅಕ್ರಮ ನಡೆಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಗಡಿಯ ದರ್ಶನ್‌ ಗೌಡ ಮತ್ತು ಕುಣಿಗಲ್‌ ನ ನಾಗೇಶ್‌ ಗೌಡ ಇಬ್ಬರೂ ಅಕ್ರಮ ನಡೆಸಿದ್ದಾರೆ ಎಂದು ಪೊಲೀಸರು ನೋಟಿಸ್‌ ನೀಡಿದ್ದಾರೆ. ಆದರೆ ವಿಚಾರಣೆ ನಡೆಸದೇ ಹಾಗೆ ಬಿಟ್ಟು ಕಳುಹಿಸಿದ್ದಾರೆ. ಇವರ ಹೇಳಿಕೆಯನ್ನು ಯಾಕೆ ಪಡೆಯಲಿಲ್ಲ ಎಂದು ಪ್ರಶ್ನಿಸಿದರು್
ದರ್ಶನ್‌ ಗೌಡ ೫೦ ಅಂಕಗಳ ಲಿಖಿತ ಪರೀಕ್ಷೆಯಲ್ಲಿ 19 ಅಂಕ ಗಳಿಸಿದ್ದಾರೆ. ಆದರೆ ಮಲ್ಟಿಪಲ್‌ ಚಾಯ್ಸ್‌ ಪರೀಕ್ಷೆಯ 150 ಅಂಕಗಳಲ್ಲಿ 141 ಪಡೆದಿದ್ದಾರೆ. ನಾಗೇಶ್‌ ಗೌಡ 29.5 ಮತ್ತು  127.895 ಅಂಕಗಳನ್ನು ಪಡೆದಿದ್ದಾರೆ. ಇದು ಹೇಗೆ ಸಾಧ್ಯ? ದಿಢೀರನೆ ಇವರಿಬ್ಬರು ಒಂದು ಪರೀಕ್ಷೆಯಲ್ಲಿ ಕಡಿಮೆ ಮತ್ತೊಂದು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಪರೀಕ್ಷಾ ಅಕ್ರಮದಲ್ಲಿ ಅಶ್ವಥ್‌ ನಾರಾಯಣ್‌ ಭಾಗಿಯಾಗಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ನಿಮ್ಮ ಸ್ಕಿನ್ ರೊಟೀನ್ ಏನು ಸಾರ್.. ಹರ್ಲಿನ್ ಡಿಯೋಲ್ ಪ್ರಶ್ನೆಗೆ ನಾಚಿಕೊಂಡ ಪ್ರಧಾನಿ ಮೋದಿ video

ರಾಹುಲ್ ಗಾಂಧಿ ಮತಗಳ್ಳತನ ಮಾಡಿದ್ದ ಬ್ರೆಜಿಲ್ ಮಾಡೆಲ್ ಶಾಕಿಂಗ್ ರಿಯಾಕ್ಷನ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments