Webdunia - Bharat's app for daily news and videos

Install App

ಶ್ರೀಗಳಿಗೆ ಚಿಕಿತ್ಸೆ ನೀಡಿದ ವೈದ್ಯರಿಗೆ `ಧರ್ಮ’ದ ಹಣೆ ಪಟ್ಟಿ ಕಟ್ಟಿ ವಿವಾದಕ್ಕೀಡಾದ ಡಿಕೆಶಿ

Webdunia
ಸೋಮವಾರ, 10 ಡಿಸೆಂಬರ್ 2018 (13:53 IST)
ಬೆಳಗಾವಿ : ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ನಡೆದಾಡುವ ದೇವರು ಸಿದ್ಧಗಂಗಾ ಶ್ರೀಗಳಿಗೆ  ಚಿಕಿತ್ಸೆ ನೀಡಿದ ರೇಲಾ ಆಸ್ಪತ್ರೆಯ  ವೈದ್ಯರಿಗೆ `ಧರ್ಮ’ದ ಹಣೆ ಪಟ್ಟಿಯನ್ನು ಕಟ್ಟಿ ವಿವಾದಕ್ಕೆ ಕಾರಣರಾಗಿದ್ದಾರೆ.


ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಮುಸ್ಲಿಮ್ ಆಡಳಿತವಿದ್ದರೂ ಶ್ರೀಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಪಸಂಖ್ಯಾತ ಆಡಳಿತ ಮಂಡಳಿ ಇದ್ದರೂ ಶ್ರೀಗಳನ್ನ ಚೆನ್ನಾಗಿ ನೋಡ್ಕೊಂಡಿದ್ದಾರೆ. ಡಾಕ್ಟರ್ ಮೊಹಮ್ಮದ್ ರೆಲಾ ಮಾಲೀಕತ್ವದ ರೆಲಾ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಿವಾದತ್ಮಾಕ ಹೇಳಿಕೆ ನೀಡಿದ್ದಾರೆ.


ನನಗೆ ಬಹಳ ಸಂತೋಷವಾಯ್ತು. ನಿಜವಾಗಲೂ ಕರ್ನಾಟಕ ರಾಜ್ಯದಲ್ಲಿ ಅಂತಹ ಆಸ್ಪತ್ರೆಯನ್ನು ನಾನು ನೋಡಿಲ್ಲ. ಜಾತಿ-ಧರ್ಮದ ಬಗ್ಗೆ ಮಾತನಾಡುತ್ತಿರುವ ನಾವು ಒಂದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಮೊಹಮ್ಮದ್ ರೇಲಾ ಎಂಬಂತಹ ಮುಸಲ್ಮಾನ ಅಲ್ಪಸಂಖ್ಯಾತರು. ಅವರ ಹೆಸರಿನಲ್ಲಿ ರೇಲಾ ಅನ್ನುವ ಆಸ್ಪತ್ರೆಯೊಂದನ್ನು ಮಾಡಿದ್ದಾರೆ. ಅವರು ಒಬ್ಬ ಜಗತ್ತಿನ ಫೇಮಸ್ ಸರ್ಜನ್ ಆಗಿದ್ದಾರೆ. ನಮ್ಮ ಶ್ರೀಗಳಿಗೆ ಅವರು ಶಸ್ತ್ರಚಿಕಿತ್ಸೆಯನ್ನು ಮಾಡಿದ್ದಾರೆ ಎಂದು ಹೇಳಿದ್ದಾರೆ.


ಸಚಿವ ಡಿಕೆ ಶಿವಕುಮಾರ್ ನೀಡಿರುವ ಈ ಹೇಳಿಕೆ ಇದೀಗ ಬಾರೀ ಚರ್ಚೆಗೆ ಕಾರಣವಾಗಿದ್ದು, ಸಿದ್ಧಗಂಗಾ ಶ್ರೀಗಳಿಗೆ ನಿಸ್ವಾರ್ಥವಾಗಿ ಚಿಕಿತ್ಸೆ ನೀಡಿ ಸೇವೆ ಸಲ್ಲಿಸಿದ ವೈದ್ಯರಿಗೆ `ಧರ್ಮ’ದ ಹಣೆ ಪಟ್ಟಿಯನ್ನು ಕಟ್ಟಿರುವುದು ಸರಿಯೇ ಎಂಬ ಪ್ರಶ್ನೆ ಈಗ ಉದ್ಭವವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments