Select Your Language

Notifications

webdunia
webdunia
webdunia
webdunia

ಡಿಸಿ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡ ಸಚಿವರು

ಡಿಸಿ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡ ಸಚಿವರು
ಬೆಂಗಳೂರು , ಶನಿವಾರ, 17 ಏಪ್ರಿಲ್ 2021 (12:31 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಡಿಸಿಗಳು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಚಿವರು ಸಭೆ ಕರೆದಿದ್ದಾರೆ.

ಈ ಸಭೆಯಲ್ಲಿ ಆರ್.ಅಶೋಕ್, ಸಚಿವ ಬಸವರಾಜ್ ಬೊಮ್ಮಾಯಿ, ಡಾ.ಸುಧಾಕರ್ ಭಾಗವಹಿಸಿದ್ದಾರೆ. ಹಾಗೇ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳಿಗೆ ಸಚಿವರ ಫುಲ್  ಕ್ಲಾಸ್ ತೆಗೆದುಕೊಂಡಿದ್ದಾರೆ. ಟೆಸ್ಟ್ ಬಗ್ಗೆ ಡಾಟಾ ಎಂಟ್ರಿ ಆಗದ ಬಗ್ಗೆ ಕಿಡಿಕಾರಿದ್ದಾರೆ.

ಹಾಗೇ ಡಾಟಾ ಎಂಟ್ರಿಗೆ ಸಿಬ್ಬಂದಿ ನೇಮಿಸಲು ಸೂಚಿಸಿದ್ದಾರೆ. ಕೊರೊನಾ ಕಂಟ್ರೋಲ್ ಗೆ ಸಮಾರೋಪಾದಿಯ ಕೆಲಸ ಮಾಡಿ. ಕೋವಿಡ್ ಟೆಸ್ಟ್ ಗೊಂದಲದ ಬಗ್ಗೆ ಅಶೋಕ್ ಪ್ರಸ್ತಾಪ ಮಾಡಿದ್ದಾರೆ. ಕೊರೊನಾ ಕಂಟ್ರೋಲ್ ನಲ್ಲಿ ಸಮಸ್ಯೆ ಆಗಬಾರದು ಎಂದು ಜಿಲ್ಲಾಧಿಕಾರಿಗಳಿಗೆ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಕೊರೊನಾ