Webdunia - Bharat's app for daily news and videos

Install App

ಮರಿ ಆನೆ ಅಂಬಾರಿ ಹೊರಲು ಕೊಡಲ್ಲ: ವಿಜಯೇಂದ್ರಗೆ ಯೋಗೇಶ್ವರ್ ಟಾಂಗ್

Webdunia
ಭಾನುವಾರ, 4 ಜುಲೈ 2021 (20:20 IST)
ಮುಖ್ಯಮಂತ್ರಿ ಸ್ಥಾನ ಅನ್ನುವುದು ಅಂಬಾರಿ ಇದ್ದಂತೆ. ಅದನ್ನು ದೊಡ್ಡ ಆನೆಯೇ ಹೊರಬೇಕು. ಮರಿ ಆನೆಗೆ ಹೊರಿಸಲು ಆಗಲ್ಲ ಎಂದು ಸಚಿವ ಸಿಪಿ ಯೋಗೇಶ್ವರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರಗೆ ಪರೋಕ್ಷವಾಗಿ ಟಾಂಗ್ ನೀಡಿದರು.
ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನ ಅನ್ನುವುದು ಸಂವೇದನಶೀಲ, ಆಲೋಚನೆಯುಳ್ಳ ಆನೆ ತೂಕದ ವ್ಯಕ್ತಿಗೆ ಸೂಕ್ತ. ಸಿಎಂ ಹುದ್ದೆ ವೈಭವ, ಪ್ರತಿಷ್ಠೆ ಅಲ್ಲ. ರಾಜ್ಯದ ಜನರ ಆಶೋತ್ತರಗಳನ್ನ ಈಡೇರಿಸುವಂತಿರಬೇಕು. ಆದರೆ ಈಗ ಹಾಗೆ ಆಗುತ್ತಿಲ್ಲ ಎಂದರು.
ಬದಲಾವಣೆ ಜಗದ ನಿಯಮ. ಅರ್ಜುನ ಅಭಿಮನ್ಯು ಕೆಲ ವರ್ಷ ಅಂಬಾರಿ ಹೊತ್ತವು. ಅಪ್ಪ ಹೊತ್ತ ಅಂತ ಮರಿ ಆನೆಗೆ ಅಂಬಾರಿ ಹೊರಿಸೋಕೆ ಆಗಲ್ಲ. ನನ್ನ ಹಣೆ ಬರಹ ಏನು ಮಾಡೋದು ದೇವಾಲಯದ ಗೋಪುರದ ಫೌಂಟೇನ್ ತರಹ ಆಗಿದ್ದೀನಿ. ನನ್ನ ಕಷ್ಟ ಯಾರು ಕೇಳ್ತಾರೆ ಎಂದು ಅವಲತ್ತುಗೊಂಡರು.
ಸಿದ್ದರಾಮಯ್ಯ ಪದೇ ಪದೇ 25 ಪರ್ಸೆಂಟ್ ಸರ್ಕಾರ ಅಂತಾರೆ. ನಾವು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ನಮ್ಮನ್ನೆಲ್ಲಾ ಒಟ್ಟೊಟ್ಟಿಗೆ ಸೇರಿಸಿ ಹೇಳಬಾರದು. ವಿಜಯೇಂದ್ರಗೆ ಸರ್ಕಾರದಲ್ಲಿ ಯಾವುದೇ ಅಧಿಕೃತ ಹುದ್ದೆ ಇಲ್ಲ. ನಮಗಾಗುವ ಚಿತ್ರಹಿಂಸೆ ಯಾರಿಗೆ ಹೇಳೋದು. ನಮ್ಮ ಸರ್ಕಾರ ಬಂದರೂ ನಮ್ಮ ಸರ್ಕಾರ ಇದೆ ಎಂಬ ಭಾವನೆ ನಮಗಿಲ್ಲ. ನಮ್ಮ ಸರ್ಕಾರದಲ್ಲಿ ವಿಪಕ್ಷದವರ ಕೈ ಮೇಲಾಗುತ್ತಿದೆ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಮೀಸಲಾತಿ ಸರ್ಕಾರ ಮಾಡಬೇಕು. ಆದರೆ ಕುಮಾರಸ್ವಾಮಿ ಹೇಳಿದಂತೆ ಮೀಸಲಾತಿ ಮಾಡಿದ್ದಾರೆ. ಅನುಕೂಲ ಬಂದಂತೆ ಮೀಸಲಾತಿ ಹಂಚಿಕೆ ಮಾಡಿದ್ದಾರೆ. ಸಾಮಾಜಿಕ ನ್ಯಾಯ  ಆಗುತ್ತಿಲ್ಲ ಎಂದು ಯೋಗೇಶ್ವರ್ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದರು.
ಶಾಸಕ ರಮೇಶ್ ಜಾರಕಿಹೊಳಿ ಷಡ್ಯಂತ್ರಕ್ಕೆ ಬಲಿ ಆಗಿರೋದು ನಿಜ. ಆದರೂ ಅವರಿಗೆ ನ್ಯಾಯ ಕೊಡುವಲ್ಲಿ ದುರುದ್ದೇಶದಿಂದ ನಿಧಾನ ಆಗುತ್ತಿದೆ ಎಂದು ಜಾರಕಿಹೊಳಿ ಪರ ಸಿ.ಪಿ.ಯೋಗೇಶ್ವರ್ ಬ್ಯಾಟ್ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments