Publish Date: Mon, 20 Nov 2017 (10:41 IST)
Updated Date: Mon, 20 Nov 2017 (10:44 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸಿದ ಹಾಗೇ ಮುಂದಿನ ವರ್ಷದಿಂದ ಉಗ್ರ ಕಸಬ್ ಜಯಂತಿಯನ್ನೂ ಆಚರಿಸಬಹುದು ಎಂದು ಬಿಜೆಪಿ ನಾಯಕ ಅನಂತ್ ಕುಮಾರ್ ವ್ಯಂಗ್ಯವಾಡಿದ್ದಾರೆ.
ಮತಾಂಧ ಟಿಪ್ಪು ಸುಲ್ತಾನ್ ನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಸಾಕಷ್ಟು ವಿರೋಧ ಕಟ್ಟಿಕೊಂಡು ಟಿಪ್ಪು ಜಯಂತಿ ಆಚರಿಸುತ್ತಿದೆ. ಈ ಕಾಂಗ್ರೆಸ್ ಸರ್ಕಾರ ಮುಂದೊಂದು ದಿನ ಮುಂಬೈ ಮೇಲೆ ದಾಳಿ ಮಾಡಿದ್ದ ಉಗ್ರ ಅಜ್ಮಲ್ ಕಸಬ್ ಜಯಂತಿಯನ್ನು ಆಚರಿಸಿದರೂ ಅಚ್ಚರಿಯಿಲ್ಲ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಲೇವಡಿ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ