Webdunia - Bharat's app for daily news and videos

Install App

ಎಸ್ಎಸ್ಎಲ್ ಸಿ ಪಾಸಾಗಿದ್ದ ಪ್ರತಿಭಾವಂತ ವಿದ್ಯಾರ್ಥಿನಿ ಹತ್ಯೆ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ

Krishnaveni K
ಶುಕ್ರವಾರ, 10 ಮೇ 2024 (11:39 IST)
ಕೊಡಗು: ಪ್ರತಿಭಾವಂತ ವಿದ್ಯಾರ್ಥಿನಿಯೊಬ್ಬಳು ಆಗಷ್ಟೇ ಎಸ್ಎಸ್ಎಲ್ ಸಿ ಪಾಸಾದ ಖುಷಿಯಲ್ಲಿದ್ದಳು. ಆದರೆ ಇದೇ ಖುಷಿಯಲ್ಲಿದ್ದ ಆಕೆಯ ಜೀವವನ್ನೇ ತೆಗೆಯಲಾಗಿದೆ. ಇದಕ್ಕೆ ಕಾರಣ ಕೇಳಿದ್ರೆ ಶಾಕ್ ಆಗ್ತೀರಿ.

ಕೊಡಗಿನ ಸೋಮಾರಪೇಟೆಯ ಸೂರ್ಲಬ್ಬಿ ಗ್ರಾಮದಲ್ಲಿ ಘಟನೆ ನಡೆದಿದೆ. ಮೀನಾ ಎಂಬ ಅಪ್ರಾಪ್ತ ಬಾಲಕಿ ಕೊಲೆಗೀಡಾದಾಕೆ. ಈಕೆ ನಿನ್ನೆಯಷ್ಟೇ ಪ್ರಕಟಗೊಂಡಿದ್ದ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಉತ್ತಮ ಅಂಕ ಪಡೆದು ಪಾಸಾಗಿ ಗ್ರಾಮಕ್ಕೇ ಖುಷಿ ತಂದಿದ್ದಳು. ಆಕೆಯ ಶಾಲೆಯವರು ಆಕೆಯ ಸಾಧನೆಯನ್ನು ಕೊಂಡಾಡಿದ್ದರು.

ಆದರೆ ಈ ಖುಷಿಯ ಬೆನ್ನಲ್ಲೇ ಆಕೆಯ ಪೋಷಕರು ಆಕೆಗೆ ಬಾಲ್ಯ ವಿವಾಹ ಮಾಡಲು ಹೊರಟಿದ್ದರು. ಓಂಕಾರಪ್ಪ ಎಂಬಾತನೊಂದಿಗೆ ವಿವಾಹ ನಿಶ್ಚಿತಾರ್ಥ ಸುದ್ದಿ ತಿಳಿದ ಗ್ರಾಮಸ್ಥರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು. ತಕ್ಷಣವೇ ಪೊಲೀಸರು ಬಂದು ಆಕೆಯ ನಿಶ್ಚಿತಾರ್ಥ ತಪ್ಪಿಸಿದ್ದರು.

ಬಳಿಕ ಎರಡೂ ಮನೆಯವರು ಅವರವರ ಮನೆಗೆ ತೆರಳಿದ್ದರು. ಆದರೆ ಮತ್ತೆ ಬಂದಿದ್ದ ವರ ಓಂಕಾರಪ್ಪ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮಚ್ಚಿನಿಂದ ರುಂಡ-ಮುಂಡ ಬೇರೆಯಾಗುವುದಂತೆ ಚುಚ್ಚಿ ಸಾಯಿಸಿದ್ದಾನೆ. ಈ ಕೃತ್ಯಕ್ಕೆ ಇಡೀ ಗ್ರಾಮಸ್ಥರೇ ಬೆಚ್ಚಿಬಿದ್ದಿದ್ದಾರೆ. ನಿಶ್ಚಿತಾರ್ಥವಾಗದ ಸಿಟ್ಟಿಗೆ ಓಂಕಾರಪ್ಪ ಈ ಕೃತ್ಯವೆಸಗಿದ್ದಾನೆ ಎಂದು ತಿಳಿದುಬಂದಿದೆ. ಇದೀಗ ಆರೋಪಿ ತಲೆಮರೆಸಿಕೊಂಡಿದ್ದು ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments