ದೇವಸ್ಥಾನದ ಅರ್ಚಕನೊಬ್ಬನು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಹೇಯ ಕೃತ್ಯ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಗರದ ಅಟ್ಟಿಲಕ್ಕಮ ದೇವಾಲಯದ ಅರ್ಚಕ ವಿಜಯ್ ಕುಮಾರ್ (33) ಎನ್ನುವ ದುರುಳ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಲಾಗಿದೆ.
ಎರಡು ದಿನಗಳ ಹಿಂದೆ ಆಟವಾಡುತ್ತಿದ್ದ ಬಾಲಕಿ ಕಾಣೆಯಾಗಿದ್ದಳು. ತಕ್ಷಣ ಆಕೆಯ ತಾಯಿ ಹುಡುಕಾಟ ನೆಡೆಸಿದ್ದರು. ಆ ಸಮಯದಲ್ಲಿ ದೇವಸ್ಥಾನದ ಹಿಂದುಗಡೆ ಅಳುತ್ತಾ ಕುಳಿತಿದ್ದ ಬಾಲಕಿ ಪತ್ತೆಯಾದಳು. ಬಾಲಕಿ ತನ್ನ ಮೇಲೆ ನಡೆದ ದೌರ್ಜನ್ಯದ ಕುರಿತು ತಾಯಿಗೆ ಮಾಹಿತಿ ನೀಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಬಾಲಕಿಯ ತಾಯಿ ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ