Select Your Language

Notifications

webdunia
webdunia
webdunia
webdunia

ಅಪ್ರಾಪ್ತೆಯನ್ನು ಅಪಹರಿಸಿ ವಿಷಪ್ರಾಶನ: ಶಂಕಿತನ ಬಂಧನ

ಅಪ್ರಾಪ್ತೆಯನ್ನು ಅಪಹರಿಸಿ ವಿಷಪ್ರಾಶನ: ಶಂಕಿತನ ಬಂಧನ
ತೀರ್ಥಹಳ್ಳಿ , ಶನಿವಾರ, 1 ನವೆಂಬರ್ 2014 (17:33 IST)
ತೀರ್ಥಹಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ವಿಷಪ್ರಾಶನ ಮಾಡಿಸಿ ಹತ್ಯೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಾಲಕಿ ಚಿಕಿತ್ಸೆ ಫಲಿಸದೇ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಆ ಯುವಕ ಪಕ್ಕದ ಮನೆಯವನು ಎಂದು ಹೇಳಲಾಗಿದೆ. ನಂದಿತಾ ಎಂಬ ಬಾಲಕಿಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಎಸ್‌ಪಿ ನೇತೃತ್ವದಲ್ಲಿ ತಂಡವೊಂದನ್ನು ರಚಿಸಲಾಗಿದೆ.

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಿಂದ , ಶಂಕಿತನ ವಿರುದ್ಧ ಸ್ಥಳೀಯರು ಆಕ್ರೋಶಗೊಂಡು ಬೈಕ್‌ಗೆ ಬೆಂಕಿ ಇಟ್ಟಿದ್ದಾರೆ. ಪೂರ್ವ ವಲಯ ಐಜಿಪಿ ಮೃತ ಬಾಲಕಿಯ ನಿವಾಸಕ್ಕೆ ಭೇಟಿ ನೀಡಿದ್ದರು. ತೀರ್ಥಹಳ್ಳಿ ತಾಲೂಕಿನ ಆನಂದಗಿರಿ ಬೆಟ್ಟದಲ್ಲಿ ಅಕ್ಟೋಬರ್ 29ರಂದು ಅಸ್ವಸ್ಥ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದಳು.

ಬಳಿಕ ಅವಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲ ಆಸ್ಪತ್ರೆಯಲ್ಲಿ  ಮೃತಪಟ್ಟಿದ್ದಳು. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಮರಣೋತ್ತರ ಪರೀಕ್ಷೆ ವರದಿಯ ಬಳಿಕ ಅತ್ಯಾಚಾರ ನಡೆದಿದ್ದರೆ ಗೊತ್ತಾಗಲಿದೆ. 

Share this Story:

Follow Webdunia kannada