ಮಂಡ್ಯ ಜಿಲ್ಲೆಯ ಮದ್ದೂರಿನ ತಾಲ್ಲೂಕಿನ ಶಿವಾರ ಗ್ರಾಮವೊಂದರ್ಲಿ ಅಪ್ರಾಪ್ತ ಬಾಲಕಿಯೊಬ್ಬಳ ಶವ ಪತ್ತೆಯಾಗಿದೆ.
ನಿನ್ನೆಯಿಂದ ನಾಪತ್ತೆಯಾಗಿದ್ದ ಬಾಲಕಿ ಇಂದು ಬೆಳಿಗ್ಗೆ ಗ್ರಾಮವೊಂದರ ಹೊರವಲಯದ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಬಾಲಕಿಯ ದೇಹ ಅರೆನಗ್ನ ಸ್ಥಿತಿಯಲ್ಲಿದ್ದು ಆಕೆಯ ಮೇಲೆ ಅತ್ಯಾಚಾರವೆಸಗಿ ನಂತರ ತಲೆ ಮೇಲೆ ಕಲ್ಲೆತ್ತಿ ಕೊಂದು ಹಾಕಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ.
ಬೆಸಗರ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಶ್ವಾನ ದಳವನ್ನು ತರಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಕೆ. ಆರ್. ಪೇಟೆಯಲ್ಲಿ ನಡೆದ ಅಪ್ರಾಪ್ತೆಯ ಕೊಲೆ ಮನಸ್ಸಿಂದ ಮಾಸುವ ಮುನ್ನವೇ ನಡೆದಿರುವ ಮತ್ತೊಂದು ಕರಾಳ ಘಟನೆ ಜಿಲ್ಲೆಯ ಜನರನ್ನು ಆತಂಕಕ್ಕೆ ದೂಡಿದೆ.