Webdunia - Bharat's app for daily news and videos

Install App

ಜಗಳವಾಡಿದ್ದಕ್ಕೆ ಸ್ನೇಹಿತನನ್ನೇ ಕಿಡ್ನಾಪ್ ಮಾಡಿದ ಅಪ್ರಾಪ್ತ ವಿದ್ಯಾರ್ಥಿಗಳು

Webdunia
ಗುರುವಾರ, 24 ಜನವರಿ 2019 (06:48 IST)
ಬೆಂಗಳೂರು : ಶಾಲೆಯ ವಾರ್ಷಿಕೋತ್ಸವದ ದಿನ ಜಗಳ ಮಾಡಿದ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬನನ್ನು ಆತನ  ಆರು ಜನ ಸ್ನೇಹಿತರು ಅಪಹರಿಸಿ ಹಿಂಸೆ ನೀಡಿದ ಘಟನೆ ಬೆಂಗಳೂರಿನ ರಾಜಗೋಪಾಲ ನಗರದಲ್ಲಿ ನಡೆದಿದೆ.




ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ .19ರಂದು ಸಂಜೆ 7.30ಕ್ಕೆ ಮನೆಯ ಸಮೀಪದಲ್ಲಿರುವ ಖಾಸಗಿ ಶಾಲೆಯ ವಾರ್ಷಿಕೋತ್ಸವಕ್ಕೆ ಹೋಗಿದ್ದ. ಅಲ್ಲಿ ಈತನಿಗೂ ಮತ್ತು ಸ್ನೇಹಿತರಿಗೂ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ.


ಎರಡು ದಿನಗಳ ಬಳಿಕ, ಸೋಮವಾರ (.21) ಸಂಜೆ 4.30ಕ್ಕೆ ಸಂತ್ರಸ್ತ ವಿದ್ಯಾರ್ಥಿ ಕಾಲೇಜು ಮುಗಿಸಿಕೊಂಡು ಗೇಟಿನ ಬಳಿ ನಿಂತಿದ್ದ ವೇಳೆ ಓಮ್ನಿ ವ್ಯಾನ್ ನಲ್ಲಿ ಬಂದ ಆರು ಜನ ಸ್ನೇಹಿತರು ಬಲವಂತವಾಗಿ ಆತನನ್ನು ವ್ಯಾನ್ ನೊಳಗೆ ಕೂರಿಸಿಕೊಂಡು ಸಮೀಪದಲ್ಲಿರುವ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿ ಕಾಂಪೌಂಡ್ ವೊಂದರ ಬಳಿ ಕೂಡಿ ಹಾಕಿ ಹಿಂಸೆ ನೀಡಿದ್ದಾರೆ.

 

ಅವರಿಂದ ಹೇಗೋ ತಪ್ಪಿಸಿಕೊಂಡು ಬಂದ ವಿದ್ಯಾರ್ಥಿ ಮನೆಗೆ ತೆರಳಿ ಪಾಲಕರಿಗೆ ನಡೆದ ವಿಷಯವನ್ನು ತಿಳಿಸಿದ್ದಾನೆ. ನಂತರ ಪಾಲಕರು ಹಾಗೂ ವಿದ್ಯಾರ್ಥಿ ರಾಜಗೋಪಾಲನಗರ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ವಿದ್ಯಾರ್ಥಿ ನೀಡಿದ ಮಾಹಿತಿ ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು 6 ಮಂದಿ ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಾಲಮಂದಿರಕ್ಕೆ ಕಳುಹಿಸುವುದಾಗಿ  ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

           

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments