Webdunia - Bharat's app for daily news and videos

Install App

ಅಪ್ರಾಪ್ತ ವಯಸ್ಕರಿಂದ ಬಾಲಕಿಯನ್ನು ಅಪಹರಿಸುವ ಯತ್ನ ವಿಫಲ: ಒಬ್ಬನ ಬಂಧನ

Webdunia
ಭಾನುವಾರ, 8 ಮೇ 2016 (12:45 IST)
ಹಣದ ಆಸೆಗಾಗಿ ಬಾಲಕಿಯನ್ನು ಅಪಹರಿಸಲು ಪ್ರಯತ್ನಿಸಿದ ಘಟನೆ ಮೈಸೂರಿನಲ್ಲಿ ವಿಫಲವಾಗಿದೆ. ಬೆಂಗಳೂರಿನಿಂದ ಬಂದಿದ್ದ ಬಾಲಕಿ ಸಿದ್ಧಾರ್ಥನಗರದ ತಮ್ಮ ಸಂಬಂಧಿಕರ ಮನೆಯ ಮುಂದೆ ಆಟವಾಡುತ್ತಿದ್ದಾಗ ಬೈಕಿನಿಂದ ಮೂವರು ಬಾಲಕಿಯನ್ನು ಅಪಹರಿಸಿದ ಕರೆದೊಯ್ದರು.

ಆಗ ಬಾಲಕಿಯ ಪೋಷಕರು ಸಿನೀಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಅಪಹರಣಕಾರರನ್ನು ಬೈಕಿನಲ್ಲಿ ಬೆನ್ನತ್ತಿ  ಅವರ ಬೈಕಿಗೆ ತಮ್ಮ ಬೈಕ್ ಡಿಕ್ಕಿಹೊಡಿಸಿದರು. ಈ ಸಂದರ್ಭದಲ್ಲಿ ಇಬ್ಬರು ತಪ್ಪಿಸಿಕೊಂಡು ಒಬ್ಬ ಸಿಕ್ಕಿಬಿದ್ದಿದ್ದಾನೆ. ಅಪಹರಿಸಿದವರು ಅಪ್ರಾಪ್ತ ವಯಸ್ಕ ಬಾಲಕರೆಂದು ಹೇಳಲಾಗಿದೆ.

ಬಾಲಕಿಯನ್ನು ಅಪಹರಿಸಿ ಬಾಲಕಿಯ ತಂದೆಗೆ ಒತ್ತೆಹಣಕ್ಕಾಗಿ ಬೇಡಿಕೆ ಸಲ್ಲಿಸಲು ಅಪಹರಣಕಾರರು ನಿರ್ಧರಿಸಿದ್ದರು. ಆದರೆ ಪೋಷಕರ ಸಮಯಪ್ರಜ್ಞೆಯಿಂದ ಅಪಹರಣ ಯತ್ನ ಸುಖಾಂತ್ಯ ಕಂಡಿದೆ.  ಬಾಲಕಿಯನ್ನು ಕ್ಷೇಮವಾಗಿ ರಕ್ಷಿಸಲಾಗಿದ್ದು, ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಗೆ ಕಾಡುತ್ತಿದೆಯಾ ಆ ಅಪ್ರಾಪ್ತ ಬಾಲಕಿಯ ಶಾಪ: 2004 ರಲ್ಲಿ ನಡೆದ ಶಾಕಿಂಗ್ ಘಟನೆಯಿದು

ಬಿಆರ್ ಪಾಟೀಲ್ ಬೆನ್ನಲ್ಲೇ ರಾಜು ಕಾಗೆಯಿಂದಲೂ ಸರ್ಕಾರದ ವಿರುದ್ಧವೇ ಬಾಂಬ್

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಬಹಳ ಜಾಣೆ, ಎರಡೇ ತಿಂಗಳಲ್ಲಿ ಕನ್ನಡ ಕಲಿತರಂತೆ

ಸರ್ಕಾರಕ್ಕೆ ಮುಜುಗರ ತಂದಿಟ್ಟ ಬೆನ್ನಲ್ಲೇ ಬಿಆರ್ ಪಾಟೀಲ್ ಗೆ ಸಿಎಂ ಬುಲಾವ್

ಮುಂದಿನ ಸುದ್ದಿ
Show comments