Webdunia - Bharat's app for daily news and videos

Install App

ಕಾಣೆಯಾಗಿದ್ದ ಬಾಲಕಿ ಗೋಣಿಚೀಲದಲ್ಲಿ ಶವವಾಗಿ ಪತ್ತೆ: ದೂರು ದಾಖಲು

Webdunia
ಶನಿವಾರ, 23 ಮೇ 2015 (12:47 IST)
ಐದು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿ ಕೊಳೆತ ಸ್ಥಿತಿಯಲ್ಲಿ ಗೋಣಿಚೀಲದಲ್ಲಿ ಪತ್ತೆಯಾಗಿರುವ ಮನಕಲಕುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗಬೇನಾಳ ಗ್ರಾಮದ ವಾಡೆಪಕ್ಕದ ಹಳ್ಳದಲ್ಲಿ ಕಂಡು ಬಂದಿದೆ.  
 
ಮೃತ ಬಾಲಕಿಯನ್ನು ಪೂಜಾ ಶರಣಪ್ಪ ಸುಲ್ತಾನಪುರ(9) ಎಂದು ಹೇಳಲಾಗಿದ್ದು, ಇದೇ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ. ಈಕೆ ಕಳೆದ 5 ದಿನಗಳ ಹಿಂದೆ ಕಾಣೆಯಾಗಿದ್ದಳು ಎಂದು ತಿಳಿದು ಬಂದಿದೆ. 
 
ಘಟನಾ ಸ್ಥಳಕ್ಕೆ ಜಿಲ್ಲೆಯ ಸಿಪಿಐ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದು, ಪ್ರಕರಣವನ್ನು ಪರಿಶೀಲಿಸಿದ್ದಾರೆ. ಮುದ್ದೆ ಬಿಹಾಳ ಠಾಣೆಯಲ್ಲಿ ಪ್ರಕಱಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. 
 
ಇನ್ನು ಈ ಬಗ್ಗೆ ಮೃತ ಬಾಲಕಿಯ ಪೋಷಕರು ಪ್ರತಿಕ್ರಿಯಿಸಿದ್ದು, ತಮ್ಮ ಪುತ್ರಿ ಕಾಣೆಯಾದ ಬಗ್ಗೆ ಇಲ್ಲಿನ ಮುದ್ದೆಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಕಾಣೆಯಾದ ದಿನದಂದೇ ಮುಂದಾಗಿದ್ದೆವು. ಆದರೆ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಿಲ್ಲ ಎಂದು ಪೊಲೀಸರನ್ನು ದೂರಿದ್ದಾರೆ. ಅಲ್ಲದೆ ಪೊಲೀಸರ ವರ್ತನೆಗೆ ಗ್ರಾಮದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments