Webdunia - Bharat's app for daily news and videos

Install App

ಮಿಷನ್ 150: ವೇದಿಕೆಯಲ್ಲಿ ಸಾಲಾಗಿ ನಿದ್ದೆ ಹೊಡೆದ ಬಿಜೆಪಿ ನಾಯಕರು

Webdunia
ಶನಿವಾರ, 16 ಸೆಪ್ಟಂಬರ್ 2017 (18:36 IST)
ಸಿಎಂ ಸಿದ್ದರಾಮಯ್ಯರನ್ನು ನಿದ್ದೆ ರಾಮಯ್ಯ ಎಂದು ಜರಿಯುತ್ತಿದ್ದ ಬಿಜೆಪಿ ನಾಯಕರು ಇಂದು ತಾವೇ ಸಭೆಯಲ್ಲಿ ನಿದ್ರೆಗೆ ಶರಣಾಗಿ ತಾವೇನು ಕಮ್ಮಿಯಿಲ್ಲ ಎನ್ನುವುದು ತೋರಿಸಿಕೊಟ್ಟಿದ್ದಾರೆ. ಬಿಜೆಪಿ ಸಭೆಯಲ್ಲಿ ವೇದಿಕೆಯ ಮೇಲಿದ್ದ ಬಿಜೆಪಿ ನಾಯಕರೆಲ್ಲ ಗಡದ್ದು ನಿದ್ದೆಗೆ ಮೊರೆಹೋದ ಘಟನೆ ವರದಿಯಾಗಿದೆ.
ನಗರದ ಗುರುರಾಜ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಚುನಾವಣೆ ಉಸ್ತುವಾರಿಗಳಾದ ಪ್ರಕಾಶ್ ಜಾವ್ಡೇಕರ್ ಮತ್ತು ಸಹ ಉಸ್ತುವಾರಿ ಪಿಯೂಷ್ ಗೋಯಲ್ ಪಾಲ್ಗೊಂಡಿದ್ದ ಸಭೆಯಲ್ಲಿ ಬಿಜೆಪಿ ನಾಯಕರು ಹೊಟ್ಟೆ ತುಂಬಾ ತಿಂದು ಗಡದ್ದು ನಿದ್ರೆಗೆ ಶರಣಾಗಿರುವುದು ಕಂಡು ಬಂದಿದೆ. 
 
ಬಿಜೆಪಿ ರಾಜ್ಯ ಚುನಾವಣೆ ಸಹ ಉಸ್ತುವಾರಿ ಪಿಯೂಷ್ ಗೋಯಲ್ ಸೇರಿದಂತೆ ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್, ಆರ್.ಅಶೋಕ್ , ಗೋವಿಂದ ಕಾರಜೋಳ ಸೇರಿದಂತೆ ಇತರ ಮುಖಂಡರು ನಿದ್ದೆಯ ಮಂಪರಿನಲ್ಲಿ ಜಾರಿರುವುದು ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ.
 
ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ಪ್ರಕಾಶ್ ಜಾವ್ಜೇಕರ್, ಮುಂಬರುವ ಚುನಾವಣೆಯಲ್ಲಿ ಮಿಷನ್ 150 ನಮ್ಮ ಗುರಿಯಾಗಬೇಕು ಎಂದು ಕರೆ ನೀಡುತ್ತಿರುವಾಗ ಬಿಜೆಪಿ ನಾಯಕರು ವೇದಿಕೆಯಲ್ಲಿಯೇ ಸಾಲಾಗಿ ನಿದ್ರೆಗೆ ಜಾರಿರುವುದು ಬಹಿರಂಗವಾಯಿತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments