Publish Date: Tue, 28 May 2019 (17:24 IST)
Updated Date: Tue, 28 May 2019 (17:27 IST)
ಯೂಥ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಿಥುನ್ ರೈಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಹಾಗೂ ಕೊಲೆ ಬೆದರಿಕೆವೊಡ್ಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ನಿವಾಸಿಗಳಾದ ಸಚಿನ್ (25), ನಿಶಾಂತ್ (23), ಕಾಸರಗೋಡು ನಿವಾಸಿ ಕಾರ್ತಿಕ್ (30) ಎಂಬವರನ್ನು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ನಲ್ಲಿ ಮೇ 23ರಂದು ರಾತ್ರಿ ಬಿಜೆಪಿ ಬಡಕಬೈಲ್ ಸಮಿತಿಯು ವಿಜಯೋತ್ಸವ ಹಮ್ಮಿಕೊಂಡಿತ್ತು.
ಈ ವೇಳೆ ಬಿಜೆಪಿ ಕಾರ್ಯಕರ್ತರು, ಮಿಥುನ್ ರೈ ಅವರಿಗೆ ಅವಾಚ್ಯ ಶಬ್ಬಗಳಿಂದ ನಿಂದಿಸಿದಲ್ಲದೆ, ಕೊಲೆ ಬೆದರಿಕೆಯನ್ನು ಒಡ್ಡಿದ್ದರು.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.