Webdunia - Bharat's app for daily news and videos

Install App

ಮಿಥುನ್ ರೈಗೆ ಕೊಲೆ ಬೆದರಿಕೆ: ಮೂವರು ಬಿಜೆಪಿ ಕಾರ್ಯಕರ್ತರು ಅರೆಸ್ಟ್

Webdunia
ಮಂಗಳವಾರ, 28 ಮೇ 2019 (17:24 IST)
ಯೂಥ್ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಿಥುನ್ ರೈಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಹಾಗೂ ಕೊಲೆ ಬೆದರಿಕೆವೊಡ್ಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ನಿವಾಸಿಗಳಾದ ಸಚಿನ್ (25), ನಿಶಾಂತ್ (23), ಕಾಸರಗೋಡು ನಿವಾಸಿ ಕಾರ್ತಿಕ್ (30) ಎಂಬವರನ್ನು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್‌ನಲ್ಲಿ ಮೇ 23ರಂದು ರಾತ್ರಿ ಬಿಜೆಪಿ ಬಡಕಬೈಲ್ ಸಮಿತಿಯು ವಿಜಯೋತ್ಸವ ಹಮ್ಮಿಕೊಂಡಿತ್ತು.

ಈ ವೇಳೆ ಬಿಜೆಪಿ ಕಾರ್ಯಕರ್ತರು, ಮಿಥುನ್ ರೈ ಅವರಿಗೆ ಅವಾಚ್ಯ ಶಬ್ಬಗಳಿಂದ ನಿಂದಿಸಿದಲ್ಲದೆ, ಕೊಲೆ ಬೆದರಿಕೆಯನ್ನು ಒಡ್ಡಿದ್ದರು. 

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಕನ್ನಡವನ್ನು ಭುವನೇಶ್ವರಿ ಮಾಡಿ ದೌರ್ಜನ್ಯ ಮಾಡಿದ್ರಿ ಎಂದಿದ್ದ ಬಾನು ಮುಷ್ತಾಕ್

ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments