Webdunia - Bharat's app for daily news and videos

Install App

ಭಾರತ್ ಬಂದ್‌ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ

Webdunia
ಶುಕ್ರವಾರ, 2 ಸೆಪ್ಟಂಬರ್ 2016 (11:23 IST)
ರಾಜ್ಯಾದ್ಯಂತ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನ ವಿಧಾನಸೌಧ, ವಿಕಾಸಸೌಧದಲ್ಲಿ ನೌಕರರಿಲ್ಲದೇ ಬಣಗುಡುತ್ತಿದ್ದು, ಸರ್ಕಾರಿ, ಖಾಸಗಿ ಬಸ್‌ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಪೀಣ್ಯದಿಂದ ಟೌನ್ ಹಾಲ್‌ವರೆಗೆ ಸಿಐಟಿಯು ನೇತೃತ್ವದಲ್ಲಿ ನಡೆಸುತ್ತಿರುವ ರಾಲಿಯಲ್ಲಿ ನೂರಾರು ಕಾರ್ಮಿಕರು ಪಾಲ್ಗೊಂಡಿದ್ದಾರೆ. ಟೌನ್ ಹಾಲ್ ಬಳಿ ಸಾವಿರಾರು ಕಾರ್ಮಿಕರು ಜಮಾಯಿಸಿ ಕೇಂದ್ರ ಸರ್ಕಾರದ ವಿರುದ್ಧ  ಬೇಕೇ ಬೇಕು ನ್ಯಾಯ ಬೇಕು, ಕಾರ್ಮಿಕ ವಿರೋಧಿ ನೀತಿಗೆ ಧಿಕ್ಕಾರ, ದಿಕ್ಕಾರ ಎಂಬ ಘೋಷಣೆಗಳನ್ನು ಕೂಗಿದರು.  ಟೌನ್‌ಹಾಲ್‌ನಿಂದ ಫ್ರೀಡಂಪಾರ್ಕ್‌ ವರೆಗೆ ಕಾರ್ಮಿಕ ಸಂಘಟನೆಗಳು ರಾಲಿ ನಡೆಸಲು ಉದ್ದೇಶಿಸಿವೆ.  ಮಲ್ಲೇಶ್ವರದಲ್ಲಿ ಗೌರಿ ಗಣೇಶ ಹಬ್ಬದ ಶಾಪಿಂಗ್‌ಗೆ ಬಂದ್ ಬಿಸಿ ತಟ್ಟಿದೆ. ಮಲ್ಲೇಶ್ವರ 8ನೇ ಕ್ರಾಸ್‌ನಲ್ಲಿ ಗ್ರಾಹಕರಿಲ್ಲದೇ ವ್ಯಾಪಾರಿಗಳು ಪರದಾಡುತ್ತಿದ್ದಾರೆ.

ತುಮಕೂರಿನಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸುಮಾರು 10 ತಾಲೂಕುಗಳಲ್ಲಿ ಬಂದ್ ಯಶಸ್ವಿಯಾಗಿದೆ. ರಾಯಚೂರಿನಲ್ಲಿ ಸರ್ಕಾರಿ ಬಸ್ ಸಂಚಾರ ಬಂದ್ ಆಗಿದ್ದು, ಮಕ್ಕಳು ಗೂಡ್ಸ್ ವಾಹನದಲ್ಲಿ ಶಾಲೆಗೆ ಆಗಮಿಸುವ ಮೂಲಕ ಬಂದ್ ಬಿಸಿ ಮಕ್ಕಳಿಗೂ ತಟ್ಟಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments