Webdunia - Bharat's app for daily news and videos

Install App

ಸರಕಾರದ ಒನ್ ಕ್ಲಾಸ್, ಒನ್ ಚಾನಲ್ ಯೋಜನೆಗೆ ತಜ್ಞರಿಂದ ಮಿಶ್ರ ಪ್ರತಿಕ್ರಿಯೆ

Webdunia
ಬುಧವಾರ, 2 ಫೆಬ್ರವರಿ 2022 (21:00 IST)
ಕೋವಿಡ್ ಸಾಂಕ್ರಾಮಿಕದ ಸಂದರ್ಭದ ಲಾಕ್ ಡೌನ್ ಗಳ ವೇಳೆ ಶಾಲೆಗಳನ್ನು ಮುಚ್ಚಿದ್ದರಿಂದ  ಉಂಟಾಗಿರುವ ಕಲಿಕಾ ನಷ್ಟವನ್ನು ಸರಿದೂಗಿಸಲೆಂದು ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ಘೋಷಿಸಿರುವ ʼಒನ್ ಕ್ಲಾಸ್, ಒನ್ ಚಾನಲ್ʼ ಯೋಜನೆಗೆ ತಜ್ಞರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಒಂದರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಪ್ರತಿ ತರಗತಿಗೆಂದು ಒಂದು ಚಾನೆಲ್  ಆರಂಭಿಸಲಾಗುವುದು. ಪೂರಕ ಕಲಿಕೆಗೆ ಅವಕಾಶವೊದಗಿಸುವ ಚಾನಲ್ ಗಳ ಸಂಖ್ಯೆಯನ್ನು 12ರಿಂದ 200ಕ್ಕೆ ಏರಿಕೆ ಮಾಡಲಾಗುವುದು, ಈ ಚಾನೆಲ್ ಗಳ ಮೂಲಕ ಪ್ರಾದೇಶಿಕ ಮತ್ತು ಆಯಾಯ ರಾಜ್ಯಗಳ ಪಠ್ಯಕ್ರಮ ಆಧರಿತ ಶಿಕ್ಷಣ ಒದಗಿಸಲಾಗುವುದು, ಎಂದು ಸಚಿವೆ ಹೇಳಿದ್ದಾರೆ.
ಆದರೆ ಸರಕಾರದ ಈ ಪ್ರಸ್ತಾವನೆಯನ್ನು ಕೆಲ ತಜ್ಞರು ಸ್ವಾಗತಿಸಿದ್ದಾರಾದರೂ ಇನ್ನು ಕೆಲವರು ಟೀಕಿಸಿದ್ದಾರೆ. ಖ್ಯಾತ ಸಾಂಕ್ರಾಮಿಕ ರೋಗಗಳ ತಜ್ಞ  ಹಾಗೂ ದಿಲ್ಲಿಯಲ್ಲಿ ಶಾಲೆಗಳನ್ನು ಪುನರಾರಂಭಿಸಬೇಕೆಂದು ಸರಕಾರದ ಮೇಲೆ ಒತ್ತಡ ಹೇರಿದ್ದ ಪೋಷಕರ ಸಂಘದ ಭಾಗವಾಗಿರುವ ಡಾ ಚಂದ್ರಕಾಂತ್ ಲಹರಿಯಾ ಪ್ರತಿಕ್ರಿಯಿಸಿ, "ಟಿವಿ ಚಾನಲ್ ಆಧರಿತ ಶಿಕ್ಷಣವು  ಕಲಿಕಾ ನಷ್ಟಕ್ಕೆ ಪರಿಹಾರವಲ್ಲ, ನಮ್ಮ ಮಕ್ಕಳು ಎದುರಿಸಿದ ಕಲಿಕಾ ನಷ್ಟದ ಬಗ್ಗೆ ನಾವು ಗಂಭೀರವಾಗಿಲ್ಲ ಎಂಬುದನ್ನು ಇದು ತೋರಿಸುತ್ತದೆ. ಈ ರೀತಿ ಹೂಡಿಕೆ ಮಾಡುವುದಕ್ಕಿಂತ ಶಾಲಾ ಶಿಕ್ಷಣದಲ್ಲಿ ಹೂಡಿಕೆ ಮಾಡಿ" ಎಂದು ಟ್ವೀಟ್ ಮಾಡಿದ್ದಾರೆ.
ಮಕ್ಕಳು ಎದುರಿಸಿದ ಕಲಿಕಾ ನಷ್ಟಗಳಿಗೆ ಹೋಲಿಸಿದಾಗ ಸರಕಾರದ ಕ್ರಮ ಅತ್ಯಲ್ಪ ಎಂದು ಐಐಎಂ ಅಹ್ಮದಾಬಾದ್ ಇಲ್ಲಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರೊಫೆಸರ್ ತರುಣ್ ಜೈನ್ ಹೇಳಿದರೆ, ಐಸಿಸಿಆರ್ ಅಧ್ಯಕ್ಷ ವಿನಯ್ ಸಹಸ್ರಬುದ್ಧೆ ಪ್ರತಿಕ್ರಿಯಿಸಿ ಇದೊಂದು ವಿನೂತನ ಪ್ರಯತ್ನ ಎಂದು ಶ್ಲಾಘಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments