ಕಾಂಗ್ರೆಸ್ ಶಾಸಕ, ಆರ್ ಎಸ್ಎಸ್ ಕಾರ್ಯಕರ್ತನಾಗಿದ್ದ ಶಾಸಕ ಅಶೋಕ್ ರೈ ಸಂಘದ ಬಗ್ಗೆ ಹೇಳಿದ್ದೇನು

Krishnaveni K
ಗುರುವಾರ, 23 ಅಕ್ಟೋಬರ್ 2025 (10:37 IST)

ಮಂಗಳೂರು: ಒಂದೆಡೆ ರಾಜ್ಯದಲ್ಲಿ ಆರ್ ಎಸ್ಎಸ್ ಮತ್ತು ರಾಜ್ಯ ಸರ್ಕಾರದ ನಡುವಿನ ಜಟಾಪಟಿ ತಾರಕಕ್ಕೇರಿದೆ. ಈ ನಡುವೆ ಆರ್ ಎಸ್ಎಸ್ ಹಿನ್ನಲೆಯಿಂದ ಬಂದ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ಸಂಘದ ಬಗ್ಗೆ ಹೇಳುವುದೇನು ಗೊತ್ತಾ?

ಅಶೋಕ್ ರೈ ಮೊದಲು ಬಿಜೆಪಿಯಲ್ಲಿದ್ದವರು. ಆದರೆ ಅಲ್ಲಿ ತಮಗೆ ಸೂಕ್ತ ಸ್ಥಾನ ಮಾನ ಸಿಗಲಿಲ್ಲವೆಂದು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ವಿಧಾನಸಭೆ ಚುನಾವಣೆಗೆ ನಿಂತು ಗೆಲುವು ಸಾಧಿಸಿದ್ದರು. ಆದರೆ ಅವರ ಮೂಲ ಆರ್ ಎಸ್ಎಸ್.

ಇದೀಗ ಕಹಳೆ ನ್ಯೂಸ್ ಸಂದರ್ಶನದಲ್ಲಿ ಅಶೋಕ್ ರೈ ಅವರಿಗೆ ಆರ್ ಎಸ್ಎಸ್ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದು ಕೇಳಲಾಗಿತ್ತು. ಇದಕ್ಕೆ ಉತ್ತರಿಸಿರುವ ಅವರು ‘ಆರ್ ಎಸ್ಎಸ್ ಸಂಸ್ಥೆ ಕೆಟ್ಟದ್ದು ಎಂದು ನಾನು ಹೇಳಲ್ಲ. ಅದು ಮಾಡುವ ಕೆಲವು ಕೆಲಸಗಳು ಕೆಲವರಿಗೆ ಇಷ್ಟವಾಗದೇ ಇರಬಹುದು. ಆದರೆ ಸಂಸ್ಥೆಯನ್ನು ಕೆಟ್ಟದ್ದು ಎಂದು ನಾನು ಹೇಳುವುದಿಲ್ಲ. ರಾಜಕೀಯವಾಗಿ ಕೆಲವರು ವಿರೋಧಿಸಬಹುದು. ಆದರೆ ಈ ಸಂಸ್ಥೆ ತನ್ನದೇ ಕೆಲವು ಕಾರ್ಯಕ್ರಮಗಳನ್ನು ರೂಪಿಸಕೊಂಡು ಅದಕ್ಕೆ ತಕ್ಕಂತೆ ಹೋಗ್ತಿದೆ. ಅದು ಕೆಲವರಿಗೆ ಇಷ್ಟವಾಗದೇ ಇರಬಹುದು’ ಎಂದು ಅಶೋಕ್ ರೈ ಹೇಳಿದ್ದಾರೆ.

ವಿಶೇಷವೆಂದರೆ ಅವರು ಎಲ್ಲೂ ಆರ್ ಎಸ್ಎಸ್ ಸಂಸ್ಥೆಯ ಬಗ್ಗೆ ನಕಾರಾತ್ಮಕವಾಗಿ ಮಾತನಾಡಿಲ್ಲ. ಇದೀಗ ಆರ್ ಎಸ್ಎಸ್ ವರ್ಸಸ್ ಸರ್ಕಾರದ ನಡುವಿನ ಜಟಾಪಟಿ ನಡುವೆ ಅಶೋಕ್ ರೈ ಗಣ ವೇಷದಲ್ಲಿರುವ ಫೋಟೋ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿಪರೀತ ಚಳಿ ನಡುವೆ ಈ ವಾರದ ಹವಾಮಾನ ವರದಿ ಗಮನಿಸಿ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮುಂದಿನ ಸುದ್ದಿ
Show comments