ಕಾಂಗ್ರೆಸ್ ಶಾಸಕ, ಆರ್ ಎಸ್ಎಸ್ ಕಾರ್ಯಕರ್ತನಾಗಿದ್ದ ಶಾಸಕ ಅಶೋಕ್ ರೈ ಸಂಘದ ಬಗ್ಗೆ ಹೇಳಿದ್ದೇನು

Krishnaveni K
ಗುರುವಾರ, 23 ಅಕ್ಟೋಬರ್ 2025 (10:37 IST)

ಮಂಗಳೂರು: ಒಂದೆಡೆ ರಾಜ್ಯದಲ್ಲಿ ಆರ್ ಎಸ್ಎಸ್ ಮತ್ತು ರಾಜ್ಯ ಸರ್ಕಾರದ ನಡುವಿನ ಜಟಾಪಟಿ ತಾರಕಕ್ಕೇರಿದೆ. ಈ ನಡುವೆ ಆರ್ ಎಸ್ಎಸ್ ಹಿನ್ನಲೆಯಿಂದ ಬಂದ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ಸಂಘದ ಬಗ್ಗೆ ಹೇಳುವುದೇನು ಗೊತ್ತಾ?

ಅಶೋಕ್ ರೈ ಮೊದಲು ಬಿಜೆಪಿಯಲ್ಲಿದ್ದವರು. ಆದರೆ ಅಲ್ಲಿ ತಮಗೆ ಸೂಕ್ತ ಸ್ಥಾನ ಮಾನ ಸಿಗಲಿಲ್ಲವೆಂದು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ವಿಧಾನಸಭೆ ಚುನಾವಣೆಗೆ ನಿಂತು ಗೆಲುವು ಸಾಧಿಸಿದ್ದರು. ಆದರೆ ಅವರ ಮೂಲ ಆರ್ ಎಸ್ಎಸ್.

ಇದೀಗ ಕಹಳೆ ನ್ಯೂಸ್ ಸಂದರ್ಶನದಲ್ಲಿ ಅಶೋಕ್ ರೈ ಅವರಿಗೆ ಆರ್ ಎಸ್ಎಸ್ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದು ಕೇಳಲಾಗಿತ್ತು. ಇದಕ್ಕೆ ಉತ್ತರಿಸಿರುವ ಅವರು ‘ಆರ್ ಎಸ್ಎಸ್ ಸಂಸ್ಥೆ ಕೆಟ್ಟದ್ದು ಎಂದು ನಾನು ಹೇಳಲ್ಲ. ಅದು ಮಾಡುವ ಕೆಲವು ಕೆಲಸಗಳು ಕೆಲವರಿಗೆ ಇಷ್ಟವಾಗದೇ ಇರಬಹುದು. ಆದರೆ ಸಂಸ್ಥೆಯನ್ನು ಕೆಟ್ಟದ್ದು ಎಂದು ನಾನು ಹೇಳುವುದಿಲ್ಲ. ರಾಜಕೀಯವಾಗಿ ಕೆಲವರು ವಿರೋಧಿಸಬಹುದು. ಆದರೆ ಈ ಸಂಸ್ಥೆ ತನ್ನದೇ ಕೆಲವು ಕಾರ್ಯಕ್ರಮಗಳನ್ನು ರೂಪಿಸಕೊಂಡು ಅದಕ್ಕೆ ತಕ್ಕಂತೆ ಹೋಗ್ತಿದೆ. ಅದು ಕೆಲವರಿಗೆ ಇಷ್ಟವಾಗದೇ ಇರಬಹುದು’ ಎಂದು ಅಶೋಕ್ ರೈ ಹೇಳಿದ್ದಾರೆ.

ವಿಶೇಷವೆಂದರೆ ಅವರು ಎಲ್ಲೂ ಆರ್ ಎಸ್ಎಸ್ ಸಂಸ್ಥೆಯ ಬಗ್ಗೆ ನಕಾರಾತ್ಮಕವಾಗಿ ಮಾತನಾಡಿಲ್ಲ. ಇದೀಗ ಆರ್ ಎಸ್ಎಸ್ ವರ್ಸಸ್ ಸರ್ಕಾರದ ನಡುವಿನ ಜಟಾಪಟಿ ನಡುವೆ ಅಶೋಕ್ ರೈ ಗಣ ವೇಷದಲ್ಲಿರುವ ಫೋಟೋ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಕ್ಕು ಸ್ಥಾವರದಲ್ಲಿ ಭಾರಿ ಪ್ರಮಾಣದ ಲೋಹ ಹರಿದು 9ಮಂದಿ ಸಾವು, ಹಲವರಿಗೆ ಗಾಯ

ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತನ ಕೈ ತುಂಡಾಗುವ ಮಟ್ಟಿಗೆ ಹಲ್ಲೆ

ಗ್ರ್ಯಾಂಡ್‌ ಮಾಸ್ಟರ್ ಆರ್ ಪ್ರಜ್ಞಾನಂದ್‌ ಜತೆ ಚೆಸ್ ಆಡಿದ ವಿಜಯ್, Video

ಉಪಮುಖ್ಯಮಂತ್ರಿ ಹುದ್ದೆಯನ್ನು ಬಯಸಿದ್ರಾಂತ್ತೆ ಈ ಸಚಿವರು, ಕೊನೆಗೂ ಅಮಾಧಾನ ಹೊರಹಾಕಿದ ಕೈ ನಾಯಕ

ಇಂದಿನಿಂದ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿ ಹವಾಮಾನದಲ್ಲಿ ವ್ಯತ್ಯಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments