Webdunia - Bharat's app for daily news and videos

Install App

ಬಹಿರಂಗ ಸಮಾವೇಶದಲ್ಲಿ ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ

Krishnaveni K
ಭಾನುವಾರ, 2 ಫೆಬ್ರವರಿ 2025 (17:00 IST)
ಚನ್ನಪಟ್ಟಣ: ಬಹಿರಂಗ ಸಮಾವೇಶದಲ್ಲಿ ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎನ್ನುವ ಮೂಲಕ ಶಾಸಕ ಬಾಲಕೃಷ್ಣ ಹೊಸ ಚರ್ಚೆ ಹುಟ್ಟು ಹಾಕಿದ್ದಾರೆ.

ಇಂದು ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಗೆಲುವಿಗೆ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕೃತಜ್ಞತಾ ಸಮಾವೇಶ ನಡೆಸಲಾಗಿತ್ತು. ಈ ಸಮಾವೇಶದಲ್ಲಿ ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸುವ ಭರದಲ್ಲಿ ಮುಖ್ಯಮಂತ್ರಿಯಾಗಿ ರಾಜ್ಯದ ಚುಕ್ಕಾಣಿ ಹಿಡಿಯಲು ಸಿದ್ಧರಾಗಿರುವ ಎಂದು ಬಾಲಕೃಷ್ಣ ಹೇಳಿದ್ದಾರೆ.

ಇದೀಗ ಮತ್ತೆ ಕಾಂಗ್ರೆಸ್ ನಲ್ಲಿ ಚರ್ಚೆಗೆ ನಾಂದಿ ಹಾಡಲಿದೆ. ಈಗಾಗಲೇ ಸಿಎಂ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಹೈಕಮಾಂಡ್ ಎಚ್ಚರಿಕೆ ನೀಡಿತ್ತು. ಹಾದಿ ಬೀದಿಯಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆ, ಡಿನ್ನರ್ ಮೀಟ್ ಮಾಡುವ ಮೂಲಕ ಪಕ್ಷದೊಳಗಿನ ಭಿನ್ನಮತ ಬಹಿರಂಗವಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿತ್ತು.

ಆದರೆ ಇದರ ನಡುವೆಯೂ ಬಾಲಕೃಷ್ಣ ಈ ಹೇಳಿಕೆ ನೀಡಿರುವುದು ಸಿದ್ದರಾಮಯ್ಯ ಬಣದ ಕೆಂಗಣ್ಣಿಗೆ ಗುರಿಯಾಗಲಿದೆ. ಬಾಲಕೃಷ್ಣ ಹೇಳಿಕೆ ಬೆನ್ನಲ್ಲೇ ಮತ್ತೆ ಸಿದ್ದರಾಮಯ್ಯ, ಪರಮೇಶ್ವರ್ ಬೆಂಬಲಿಗರೂ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆಗಳನ್ನು ನೀಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿನ್ನಕ್ಕೆ ಕೊಡೋ... ಕಬ್ಬಿನ ಲಾರಿ ಅಡ್ಡಗಟ್ಟಿ ಕಾಡಾನೆ ಮಾಡಿದ್ದೇನು ನೋಡಿ Video

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ ಎಂಬ ಆರೋಪಕ್ಕೆ ಕಾಂಗ್ರೆಸ್ ನಾಯಕರೇ ಸಾಕ್ಷಿ: ವಿಜಯೇಂದ್ರ

ಮುಂದಿನ ಸುದ್ದಿ
Show comments