ವಾಲ್ಮೀಕಿ ಹಗರಣ: ಕದ್ದು ಮುಚ್ಚಿ ಓಡಾಡುತ್ತಿರುವ ಬಸನಗೌಡ ದದ್ದಲ್ಲ ಇಂದು ಸಿಕ್ಕಿಬೀಳುವ ನಿರೀಕ್ಷೆ

Krishnaveni K
ಸೋಮವಾರ, 15 ಜುಲೈ 2024 (10:36 IST)
Photo Credit: Facebook
ಬೆಂಗಳೂರು: ವಾಲ್ಮೀಕಿ ನಿಗಮ ಅವ್ಯವಹಾರದಲ್ಲಿ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿರುವ ನಿಗಮದ ಅಧ್ಯಕ್ಷ ಮತ್ತು ಶಾಸಕರಾಗಿರುವ ಬಸನಗೌಡ ದದ್ದಲ್ ಇಡಿ ಕಣ್ಣಿನಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದು ಇಂದು ಬಂಧನವಾಗುವ ನಿರೀಕ್ಷೆಯಿದೆ.

ಮಾಜಿ ಸಚಿವ ನಾಗೇಂದ್ರ ಇದೇ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿದ್ದಾರೆ. ಅವರು ಬಂಧನಕ್ಕೊಳಗಾಗುತ್ತಿದ್ದಂತೇ ಇತ್ತ ಬಸನಗೌಡ ದದ್ದಲ್ಲ ತಲೆಮರೆಸಿಕೊಂಡಿದ್ದರು. ಅವರು ಇಲ್ಲೇ ಕುಟುಂಬದ ಜೊತೆಗೇ ಇದ್ದಾರೆ ಎಂದು ಗೃಹಸಚಿವ ಜಿ ಪರಮೇಶ್ವರ್ ಹೇಳಿಕೊಂಡಿದ್ದರು. ಆದರೆ ಇಡಿ ಅಧಿಕಾರಿಗಳ ಕೈಗೆ ಸಿಕ್ಕಿರಲಿಲ್ಲ.

ಈ ನಡುವೆ ರಾಯಚೂರಿನಲ್ಲಿ ತಮ್ಮ ಆಪ್ತನ ಕಾರಿನಲ್ಲಿ ದದ್ದಲ್ ಕದ್ದು ಮುಚ್ಚಿ ಓಡಾಡುತ್ತಿದ್ದಾರೆಂದು ವರದಿಯಾಗಿದೆ. ಈ ಬಗ್ಗೆ ವಿಡಿಯೋ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇಂದು ಇಡಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಇಲ್ಲವೇ ಸ್ವತಃ ದದ್ದಲ್ಲ ಇಡಿ ವಿಚಾರಣೆಯಿಂದ ಪಾರಾಗಲು ಎಸ್ ಐಟಿ ಮುಂದೆ ಶರಣಾಗುವ ಸಾಧ್ಯತೆಯಿದೆ.

ಈ ಮೊದಲು ನಾಗೇಂದ್ರ ಕೂಡಾ ಇಡಿ ಬೇಡ, ನೀವೇ ಬಂಧಿಸಿ ಎಂದು ರಾಜ್ಯ ಸರ್ಕಾರದ ಅಧೀನಲ್ಲಿ ಬರುವ ಎಸ್ ಐಟಿಗೆ ಬೇಡಿಕೊಂಡಿದ್ದರು. ಇಡಿ ಕೇಂದ್ರ ತನಿಖಾ ಏಜೆನ್ಸಿಯಾಗಿದ್ದು, ಇದರ ಕೈಗೆ ಸಿಕ್ಕಿಬಿದ್ದರೆ ತಮ್ಮ ಪ್ರಭಾವ ಕೆಲಸ ಮಾಡಲ್ಲ ಎನ್ನುವ ಭಯ ಈ ಶಾಸಕರದ್ದು. ಇದೀಗ ದದ್ದಲ್ ಕೂಡಾ ಎಸ್ ಐಟಿ ಮುಂದೆ ಶರಣಾಗುವ ಯೋಜನೆ ಹೊಂದಿದ್ದಾರೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments