Webdunia - Bharat's app for daily news and videos

Install App

ಶಾಸಕ ಬಸವರಾಜ್ ಹೊರಟ್ಟಿಗೆ ಗುಂಡಿಟ್ಟು ಹತ್ಯೆ ಮಾಡುವ ಬೆದರಿಕೆ ಪತ್ರ

Webdunia
ಮಂಗಳವಾರ, 7 ನವೆಂಬರ್ 2017 (18:36 IST)
ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಬಸವರಾಜ್ ಹೊರಟ್ಟಿಗೆ ಗುಂಡಿಟ್ಟು ಹತ್ಯೆ ಮಾಡುವುದಾಗಿ ಜೀವ ಬೆದರಿಕೆ ಕರೆ ಬಂದಿದೆ ಎಂದು ಮೂಲಗಳು ತಿಳಿಸಿವೆ.
 
ಮುಂಬೈಯಿಂದ ಹುಬ್ಬಳ್ಳಿಗೆ ಐವರು ಶಾರ್ಪ್ ಶೂಟರ್‌ಗಳ ತಂಡ ಬಂದಿಳಿದಿದ್ದು, ಎರಡು ದಿನಗಳಲ್ಲಿ ಗುಂಡಿಟ್ಟು ಹತ್ಯೆ ಮಾಡಲಾಗುವುದಾಗಿ ಬೆದರಿಕೆಯೊಡ್ಡಲಾಗಿದೆ ಎನ್ನಲಾಗಿದೆ.
 
ಪೋಸ್ಟ್ ಮೂಲಕ ಹೊರಟ್ಟಿಯವರ ಹುಬ್ಬಳ್ಳಿ ಕಚೇರಿಗೆ ಅನಾಮಧೇಯ ಪತ್ರ ರವಾನಿಸಲಾಗಿದೆ. ಬೆದರಿಕೆ ಪತ್ರ ಬಂದಿರುವ ಬಗ್ಗೆ ಹೊರಟ್ಟಿ ಕಚೇರಿಯ ಆಪ್ತ ಸಿಬ್ಬಂದಿ ಖಚಿತಪಡಿಸಿದ್ದಾರೆ.
 
ಹೊರಟ್ಟಿಯವರ ಆಪ್ತ ಸಿಬ್ಬಂದಿ ಅನಾಮಧೇಯ ಪತ್ರವನ್ನು ಡಿಸಿಪಿಯವರಿಗೆ ರವಾನಿಸಿದ್ದು ಹೆಚ್ಚಿನ ಭದ್ರತೆ ನೀಡುವಂತೆ ಮನವಿ ಮಾಡಲಾಗಿದೆ ಎಂದು ಹೊರಟ್ಟಿಯವರ ಆತ್ಮಿಯ ಮೂಲಗಳು ತಿಳಿಸಿವೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments