Publish Date: Mon, 16 Apr 2018 (09:20 IST)
Updated Date: Mon, 16 Apr 2018 (09:21 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಅಸಮಾಧಾನವೂ ಭುಗಿಲೆದ್ದಿದೆ. ಬಾದಾಮಿ ಶಾಸಕ ಬಿಬಿ ಚಿಮ್ಮನಕಟ್ಟಿ ಸಿಎಂ ಸಿದ್ದರಾಮಯ್ಯ ಮೇಲೆ ಅಸಮಾಧಾನ ಹೊರಹಾಕಿದ್ದಾರೆ.
ಟಿಕೆಟ್ ಕೈ ತಪ್ಪಿದ ಮೇಲೆ ಸಿಎಂ ನಿವಾಸಕ್ಕೆ ಆಗಮಿಸಿದ ಶಾಸಕ ಚಿಮ್ಮನಕಟ್ಟಿ ನೀವು ಬಂದರೆ ಕ್ಷೇತ್ರ ಬಿಟ್ಟುಕೊಡುವುದಾಗಿ ಹೇಳಿದ್ದೆ. ಆದರೆ ಈಗ ನೀವೇ ನನಗೆ ಟಿಕೆಟ್ ಕೊಡದೆ ಮೋಸ ಮಾಡಿದಿರಿ. ನಿಮಮ್ಮನ್ನೇ ನಂಬಿದ್ದೆ. ನೀವೇ ಹೀಗೆ ಮಾಡಿದರೆ ಹೇಗೆ?’ ಎಂದು ಚಿಮ್ಮನಕಟ್ಟಿ ಸಿಎಂ ಬಳಿ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.
ಈ ನಡುವೆ ಶ್ರೀರಂಗಪಟ್ಟಣ, ಹಾನಗಲ್ ಕ್ಷೇತ್ರದಲ್ಲೂ ಟಿಕೆಟ್ ವಿಚಾರದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರ ಪ್ರತಿಭಟನೆ ಜೋರಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.