Webdunia - Bharat's app for daily news and videos

Install App

ಶಾಸಕ ದಡೇಸುಗೂರು ಕಾರು ಡಿಕ್ಕಿ; ವೃದ್ಧೆ ಸಾವು

Webdunia
ಬುಧವಾರ, 11 ಜನವರಿ 2023 (20:15 IST)
ಕನಕಗಿರಿ ಕ್ಷೇತ್ರದ ಶಾಸಕ ಬಸವರಾಜ ದಡೇಸುಗೂರು ಅವರ ಕಾರು ಡಿಕ್ಕಿಯಾಗಿ ಮರಿಯಮ್ಮ ನಾಯಕ ಎಂಬ ವೃದ್ಧೆ ಸಾವನಪ್ಪಿದ್ದಾರೆ. ಈ ಘಟನೆ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪುರ ಕ್ರಾಸ್ ಬಳಿ ನಡೆದಿದೆ. ನಿನ್ನೆ ಮೈಲಾಪುರ ಕ್ರಾಸ್ ಬಳಿ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೈಲಾಪುರ ಬಸ್ ನಿಲ್ದಾಣ ಬಳಿ ರಸ್ತೆ ದಾಟುತ್ತಿದ್ದ ವೃದ್ಧೆಗೆ ಶಾಸಕ ಬಸವರಾಜ ದಡೇಸುಗೂರು ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕ ನಿಯಂತ್ರಣ ಕಳೆದುಕೊಂಡು ವೃದ್ಧೆಗೆ ಡಿಕ್ಕಿ ಹೊಡೆದಿದ್ದಾನೆ. ಗಾಯಾಳು ವೃದ್ಧೆಯನ್ನ ಕಾರಟಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿತ್ತು. ವೃದ್ಧೆ ಮರಿಯಮ್ಮಗೆ ಚಿಕಿತ್ಸೆ ಕೊಡಿಸಿ ಶಾಸಕ ದಡೇಸುಗೂರು ಅಲ್ಲಿಂದ ತೆರಳಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ವೃದ್ಧೆಯನ್ನ ಬಳ್ಳಾರಿ ವಿಮ್ಸ್​ಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಇಂದು ವೃದ್ಧೆ ಮರಿಯಮ್ಮ ನಾಯಕ ಮೃತಪಟ್ಟಿದ್ದಾರೆ. ಮೂಲತಃ ಚಳ್ಳೂರು ಗ್ರಾಮದ ನಿವಾಸಿಯಾಗಿರುವ ಮರಿಯಮ್ಮ ಮೈಲಾಪುರ ಗ್ರಾಮದ ಮಗಳ ಮನೆಯಲ್ಲೇ ನೆಲೆಸಿದ್ದರು. ವೃದ್ಧಾಪ್ಯ ವೇತನಕ್ಕಾಗಿ ಚಳ್ಳೂರು ಗ್ರಾಮಕ್ಕೆ ತೆರಳಿದ್ದಾಗ ಘಟನೆ ನಡೆದಿದೆ. ಕಾರಟಗಿ ಪೊಲೀಸ್​​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments