Webdunia - Bharat's app for daily news and videos

Install App

ಶಾಸಕ ಮಾಲೀಕಯ್ಯ ಗುತ್ತೇದಾರ್‌ಗೆ ವೇದಿಕೆಯಲ್ಲೇ ತರಾಟೆ

Webdunia
ಸೋಮವಾರ, 26 ಮಾರ್ಚ್ 2018 (13:02 IST)
ಜಿಲ್ಲೆಯ ಪ್ರಭಾವಿ ಶಾಸಕರೆಂದೇ ಗುರ್ತಿಸಿಕೊಂಡಿರುವ ಅಫಜಲಪುರದ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರನ್ನು ಕಾರ್ಯಕ್ರಮವೊಂದರ ವೇದಿಕೆಯಲ್ಲಿಯೇ ತಾಲೂಕು ಪಂಚಾಯಿತಿ ಉಪಾಧ್ಯಕ್ಷರೊಬ್ಬರು ತರಾಟೆಗೆ ತೆಗೆದುಕೊಂಡಿದ್ದಾರೆ. 
ಅಫಜಲಪುರ ತಾಲೂಕಿನ ಕರಜಗಿ  ಗ್ರಾಮದ ಹಾಲಿನ ಶಿಥಲೀಕರಣ ಘಟಕ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ ಮಾಲೀಕಯ್ಯ ಗುತ್ತೆದಾರ್  ಹಾಗೂ  ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಭಿಮಾಶಂಕರ ಹೋನ್ನಕೇರಿ ನಡುವೆ ವೇದಿಕೆಯಲ್ಲಿ ಜಟಾಪಟಿ ನಡೆದಿದೆ. ಉದ್ಘಾಟನೆ ಬಳಿಕ ಭಾಷಣ ಶುರುಮಾಡಿದ ಮಾಲೀಕಯ್ಯ ಗುತ್ತೇದಾರ್ ತಮ್ಮ ಅಧಿಕಾರ ಅವಧಿಯಲ್ಲಿ ರಾಜ್ಯ ಹೆದ್ದಾರಿಗಳನ್ನು ನಿರ್ಮಿಸಲಾಗಿದೆ. ಆದರೆ ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸದಸ್ಯರು ರಸ್ತೆಯನ್ನೇ ನಿರ್ಮಿಸಿಲ್ಲ ಎಂದು ಆರೋಪಿಸಿದರು.
 
 ಈ ಮಾತನ್ನು ಕೇಳಿ ಕೆರಳಿದ ಬಿಜೆಪಿಯ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ ಗ್ರಾಮ ಪಂಚಾಯಿತಿ ಅಥವಾ ತಾಲೂಕು ಪಂಚಾಯಿತಿ ಸದಸ್ಯರಿಗೆ ರಸ್ತೆ ನಿರ್ಮಿಸಲು ಹೇಗೆ ಅನುದಾನ ಬರುತ್ತದೆ ಎಂದು ಪ್ರಶ್ನಿಸಿದರು. ಹೀಗಾಗಿ ಕೆಲಕಾಲ ಶಾಸಕ ಹಾಗೂ ತಾಪಂ ಉಪಾಧ್ಯಕ್ಷ ನಡುವೆ ವೇದಿಕೆ ಮೇಲೆಯೇ ವಾಗ್ವಾದ ನಡೆಯಿತು. 
 
ಸ್ಥಳೀಯವಾಗಿ ಕಾರ್ಯಕ್ರಮ ಆಯೋಜಿಸಿದ್ದರೂ ಸಹ ಕರಜಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ತಾಲೂಕು ಪಂಚಾಯಿತಿ ಸದಸ್ಯರಿಗೆ ಕಾರ್ಯಕ್ರಮಕ್ಕೆ ಆವ್ಹಾನಿಸಿಯೇ ಇಲ್ಲ ಎಂದೂ ಆರೋಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಲೀಕಯ್ಯ ಗುತ್ತೇದಾರ್ ಅಫಜಲಪುರಕ್ಕೆ ನಾನೇ ಸಿಎಂ. ನೀನು ಬೇಕಿದ್ದರೆ ಕೋರ್ಟ್​ಗೆ ಹೋಗು ಎಂದು ತಾಲೂಕು ಪಂಚಾಯಿತಿ ಉಪಾಧ್ಯಕ್ಷನಿಗೆ ಅವಾಜ್ ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census: ಕ್ಯಾಬಿನೆಟ್ ಸಭೆಯಲ್ಲಿ ಡಿಕೆ ಶಿವಕುಮಾರ್ ಕೆಂಡಾಮಂಡಲ: ಲಿಂಗಾಯತ, ಒಕ್ಕಲಿಗರಲ್ಲೂ ಬಡವರಿಲ್ವಾ

CET Exam: ಜನಿವಾರ ಹಾಕಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ: ವಿಡಿಯೋ

Mangalore Waqf protest: ನೇಮೋತ್ಸವ ಫ್ಲೆಕ್ಸ್ ತೆಗೆದು ವಕ್ಫ್ ಪ್ರತಿಭಟನೆ ಬೋರ್ಡ್ ಹಾಕಿದ್ದಕ್ಕೆ ಆಕ್ರೋಶ

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಇದೆ ಮಳೆ ಸೂಚನೆ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ಮುಂದಿನ ಸುದ್ದಿ
Show comments