ಮತ್ತೆ ಡಿಕೆ ಶಿವಕುಮಾರ್ ಪರ ಬ್ಯಾಟ್ ಮಾಡಿದ ಶಾಸಕ ಇಕ್ಬಾಲ್ ಹುಸೇನ್: ಇನ್ನೇನು ಕಾದಿದ್ಯೋ

Krishnaveni K
ಬುಧವಾರ, 6 ಆಗಸ್ಟ್ 2025 (15:46 IST)
Photo Credit: X
ಬೆಂಗಳೂರು: ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಹೇಳಿ ಒಮ್ಮೆ ವಿವಾದಕ್ಕೆ ಸಿಲುಕಿದ್ದ ಶಾಸಕ ಇಕ್ಬಾಲ್ ಹುಸೇನ್ ಮತ್ತೆ ಅವರ ಪರ ಬ್ಯಾಟ್ ಬೀಸಿದ್ದಾರೆ. ಈ ಬಾರಿ ಏನು ಕಾದಿದ್ಯೋ ನೋಡಬೇಕಿದೆ.

ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು. ಅವರಿಗೆ ನಮ್ಮ ಬೆಂಬಲವಿದೆ ಎಂದು ಈ ಹಿಂದೆ ಹೇಳಿ ಶಾಸಕ ಇಕ್ಬಾಲ್ ಹುಸೇನ್ ರಾಜ್ಯ ಕಾಂಗ್ರೆಸ್ ನಲ್ಲಿ ಕೋಲಾಹಲ ಸೃಷ್ಟಿಸಿದ್ದರು. ಇದಾದ ಬಳಿಕ ಸ್ವತಃ ಡಿಕೆ ಶಿವಕುಮಾರ್ ಅವರೇ ಎಚ್ಚರಿಕೆ ನೀಡಿದ್ದರು. ಈ ರೀತಿ ಬಹಿರಂಗ ಹೇಳಿಕೆ ನೀಡಬಾರದು ಎಂದಿದ್ದರು.

ಇದಾದ ಬಳಿಕ ಕೆಲವು ದಿನ ತಣ್ಣಗಾಗಿದ್ದ ಇಕ್ಬಾಲ್ ಹುಸೇನ್ ಈಗ ಮತ್ತೆ ಬಾಯ್ಬಿಟ್ಟಿದ್ದಾರೆ. ಅಂದಿನ ಹೇಳಿಕೆಗೆ ಈಗಲೂ ನಾನು ಬದ್ಧನಾಗಿದ್ದೇನೆ. ಡಿಕೆ ಶಿವಕುಮಾರ್ ನಮ್ಮ ನಾಯಕರು. ಅವರ ಹೋರಾಟಗಳಿಗೆ ಬೆಲೆ ಸಿಗಬೇಕು ಎಂದಿದ್ದಾರೆ.

ಡಿಕೆ ಶಿವಕುಮಾರ್ ಗೆ ಒಳ್ಳೆಯ ಸ್ಥಾನ ಮಾನ ಸಿಗಲಿ ಎಂದು ಕೇಳುವ ಹಕ್ಕು ನನಗಿಲ್ವಾ? ನಾನೂ ಅವರೂ ಒಂದೇ ಜಿಲ್ಲೆಯವರು.ಅವರ ಹೋರಾಟಗಳಿಗೆ ಬೆಲೆ ಇಲ್ವಾ ಎಂದು ಕೇಳಿದ್ದಾರೆ. ಈ ಮೂಲಕ ಇಕ್ಬಾಲ್ ಹುಸೇನ್ ಒಮ್ಮೆ ತಣ್ಣಗಾಗಿದ್ದ ಸಿಎಂ ಬದಲಾವಣೆ ಚರ್ಚೆಯನ್ನು ಮತ್ತೆ ಬಡಿದೆಬ್ಬಿಸಿದ್ದಾರೆ. ಈಗ ಇನ್ನೇನು ಕಾದಿದ್ಯೋ ಎಂದು ಜನ ನೋಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ, ದೇಶಕ್ಕೆ ಮಲ್ಲಿಕಾರ್ಜುನ ಖರ್ಗೆ ಕೊಡುಗೆಗೆ ಭಾರತ ರತ್ನ ನೀಡಬೇಕು: ತಿಪ್ಪಣ್ಣಪ್ಪ ಕಮಕನೂರು

ಉ.ಪ್ರದೇಶ: ಬಾಡಿಗೆ ನೀಡಿದ್ದ ಮಾಲಕೀಯನ್ನೇ ಮುಗಿಸಿದ ದಂಪತಿ

ಮನೆಯಲ್ಲಿ ಕಾಣದ ಮಹೇಶ್ ಶೆಟ್ಟಿ ತಿಮರೋಡಿ, ಉಜಿರೆ ಪೇಟೆಯಲ್ಲಿ ಪ್ರಕಟಣೆ ಕೊಟ್ಟ ಪೊಲೀಸ್

ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ಬೆನ್ನಲ್ಲೇ ವಿಶ್ವನಾಯಕ ಮೋದಿಗೆ ಮತ್ತೊಂದು ಗೌರವ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ: ಕುತೂಹಲ ಮೂಡಿಸಿದ ಅಮಿತ್ ಶಾ ಭೇಟಿ

ಮುಂದಿನ ಸುದ್ದಿ
Show comments