ಶಾಸಕ ಮುನಿರತ್ನ ಹನಿಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಪ್ಲ್ಯಾನ್ ಬಯಲು: ಬೆಡ್ ರೂಮೇ ಟಾರ್ಗೆಟ್

Krishnaveni K
ಮಂಗಳವಾರ, 3 ಡಿಸೆಂಬರ್ 2024 (11:08 IST)
ಬೆಂಗಳೂರು: ರಾಜ ರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಹನಿಟ್ರ್ಯಾಪ್ ಸಂಚು ಈಗ ಬಯಲಾಗಿದೆ. ಬಿಬಿಎಂಪಿ ಮಾಜಿ ಸದಸ್ಯೆಯ ಬೆಡ್ ರೂಂನಲ್ಲಿ ಕ್ಯಾಮರಾ ಇಟ್ಟಿದ್ದ ವಿಚಾರ ಬೆಳಕಿಗೆ ಬಂದಿದೆ.

ಮುನಿರತ್ನ  ವಿರುದ್ಧ ಜಾತಿನಂದನೆ, ಲೈಂಗಿಕ ಕಿರುಕುಳ, ಹನಿಟ್ರ್ಯಾಪ್, ಏಡ್ಸ್ ಸೋಂಕು ಇಂಜೆಕ್ಟ್ ಮಾಡುತ್ತಿದ್ದ ಪ್ರಕರಣಗಳಿವೆ. ಇದೀಗ ಬಿಬಿಎಂಪಿ ಮಾಜಿ ಸದಸ್ಯೆಯನ್ನೂ ಹನಿಟ್ರ್ಯಾಪ್ ಉದ್ದೇಶಕ್ಕಾಗಿ ಬಳಸಲು ಉದ್ದೇಶಿಸಿದ್ದರು ಎಂಬುದು ತಿಳಿದುಬಂದಿದೆ. ಇದಕ್ಕಾಗಿ ಸಂತ್ರಸ್ತ ಮಹಿಳೆಯ ಬೆಡ್ ರೂಂನಲ್ಲಿ ಕ್ಯಾಮರಾ ಇಡಲು ಯತ್ನಿಸಿದ್ದರಂತೆ.

ಈ ಬಗ್ಗೆ ಆಕೆಯ ಪತಿ ನಾರಾಯಣಸ್ವಾಮಿ ಎಸ್ಐಟಿಗೆ ದಾಖಲೆ ನೀಡಲು ಸಜ್ಜಾಗಿದ್ದಾರೆ. ಈ ಮೊದಲು ಮಾಜಿ ಕಾರ್ಪೋರೇಟರ್ ಮತ್ತು ಅವರ ಪತಿ ತಮ್ಮ ವಿರುದ್ಧ ಮುನಿರತ್ನ ಕೊಲೆಗೆ ಸುಪಾರಿ ನೀಡಿದ್ದರು ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಮುನಿರತ್ನ ವಿರುದ್ಧ ಮತ್ತೊಂದು ಆರೋಪ ಹೊರಿಸಿದ್ದಾರೆ.

ನಮ್ಮ ವಿರುದ್ಧ ಮುನಿರತ್ನ ಷಡ್ಯಂತ್ರ ನಡೆಸಿದ್ದಾರೆ. ಇದಕ್ಕೆ ಅವರ ವಿರುದ್ಧ ನಮ್ಮ ಬಳಿ ಅಡಿಯೋ, ವಿಡಿಯೋ ಸಾಕ್ಷ್ಯಗಳಿವೆ. ನನ್ನ ಮತ್ತು ಪತ್ನಿ ಖಾಸಗಿ ಕ್ಷಣವನ್ನು ವಿಡಿಯೋ ಮಾಡಲು ಯತ್ನಿಸಿದ್ದರು. ಇದೇ ಉದ್ದೇಶದಿಂದ ನಮ್ಮ ಬೆಡ್ ರೂಂನಲ್ಲಿ ಕ್ಯಾಮರಾ ಇಡಲು ಯತ್ನಿಸಿದ್ದರು ಎಂದು ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ