Webdunia - Bharat's app for daily news and videos

Install App

ಎ.ಮಂಜು ಸೋಲಿಸಲು ಶಾಸಕ ಪ್ರೀತಂಗೌಡ ಪ್ಲ್ಯಾನ್! ಆಡಿಯೋ ವೈರಲ್; ಇದು ಯಾರ ಪಿತೂರಿಯಂತೆ ಗೊತ್ತಾ?

Webdunia
ಮಂಗಳವಾರ, 9 ಏಪ್ರಿಲ್ 2019 (14:24 IST)
ಹಾಸನ : ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಗೆಲ್ಲೋದಿಲ್ಲ ಎಂದು ಶಾಸಕ ಪ್ರೀತಂಗೌಡ ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೊ ಇದೀಗ ವೈರಲ್ ಆಗಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ.


1.39 ನಿಮಿಷದ ಆಡಿಯೋದಲ್ಲಿ ಕಾರ್ಯಕರ್ತ ಹಾಗೂ ಶಾಸಕರ ನಡುವೆ ಸಂಭಾಷಣೆ ನಡೆದಿದೆ ಎನ್ನಲಾಗಿದ್ದು, ಇದರಲ್ಲಿ ಏಳು ತಿಂಗಳ ಹಿಂದೆ ಎ.ಮಂಜು ಹಾಕಿಸಿದ ಪೊಲೀಸ್ ಕೇಸ್ ನ್ನು ಬಿಜೆಪಿ ಮರೆತಿಲ್ಲ. ಎ. ಮಂಜು ಎರಡು ಲಕ್ಷ ಎಂಬತ್ತು ಸಾವಿರ ಲೀಡ್ ನಲ್ಲಿ ಸೋತ ಬಳಿಕ ಮತ್ತೆ ಸಿದ್ದರಾಮಯ್ಯ ಹತ್ತಿರ ಹೋಗ್ತಾರೆ ಎಂದು ಆಡಿಯೋದಲ್ಲಿ ಹೇಳಲಾಗಿದೆ.


ಈ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕ ಪ್ರೀತಂಗೌಡ, ಎ.ಮಂಜು ಬಿಜೆಪಿಗೆ ಬಂದಿರಲಿಲ್ಲ. ಆ ವೇಳೆ ಮಾತನಾಡಿದ ಆಡಿಯೋವನ್ನು ಎಡಿಟ್ ಮಾಡಲಾಗಿದೆ. ನನ್ನ ಮತ್ತು ಎ.ಮಂಜು ನಡುವೆ ವೈಮನಸ್ಸು ಹುಟ್ಟುಹಾಕಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.


ಅಲ್ಲದೇ ಈ ಬಗ್ಗೆ ಎ.ಮಂಜು ಪ್ರತಿಕ್ರಿಯೆ ನೀಡಿ, ವೈರಲ್ ಆಗಿರುವ ಆಡಿಯೋದಲ್ಲಿ ಇರುವುದು ಸತ್ಯಾಂಶವಲ್ಲ. ಇದು ಜೆಡಿಎಸ್ ನವರ ಪಿತೂರಿಯಾಗಿದೆ. ಕಾರ್ಯಕರ್ತರು ಇದಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments