Select Your Language

Notifications

webdunia
webdunia
webdunia
webdunia

ಶಾಸಕ ರಾಮದಾಸ್ ಕಾರು ಅಪಘಾತ; ಪ್ರಾಣಾಪಾಯದಿಂದ ಪಾರಾದ ಶಾಸಕ

ಶಾಸಕ ರಾಮದಾಸ್ ಕಾರು ಅಪಘಾತ; ಪ್ರಾಣಾಪಾಯದಿಂದ ಪಾರಾದ ಶಾಸಕ
ಮಂಗಳೂರು , ಶುಕ್ರವಾರ, 23 ಆಗಸ್ಟ್ 2019 (10:51 IST)
ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಮೈಸೂರು ಕೃಷ್ಣರಾಜ ಕ್ಷೇತ್ರದ ಶಾಸಕ ರಾಮದಾಸ್ ಕಾರು ರಸ್ತೆಯಲ್ಲಿನ ಗೋಡೆಗೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಾಲ್ಸೂರಿನಲ್ಲಿ ನಡೆದಿದೆ.


ಶಾಸಕ ರಾಮದಾಸ್ ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರು ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸುಳ್ಯ ಜಾಲ್ಸೂರಿನಲ್ಲಿ ಕಾರು ರಸ್ತೆಯಲ್ಲಿನ ಗೋಡೆಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಶಾಸಕ ರಾಮದಾಸ್ ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದೆ.


ತಕ್ಷಣ ಸ್ಥಳೀಯರು ರಾಮದಾಸ್ ಮತ್ತು ಚಾಲಕನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಅಮಿತ್ ಶಾ ಅವರ ಭೇಟಿಗೆ ಮುಂದಾದ ಅನರ್ಹ ಶಾಸಕರು