Webdunia - Bharat's app for daily news and videos

Install App

ಮರಳಿಗಾಗಿ ತಾಲೂಕು ಕಚೇರಿ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಿದ ಶಾಸಕ ರೇಣುಕಾಚಾರ್ಯ

Webdunia
ಮಂಗಳವಾರ, 27 ನವೆಂಬರ್ 2018 (12:07 IST)
ದಾವಣಗೆರೆ : ಮರಳು ಸಿಗದೇ ಕಟ್ಟಡದ ಮಾಲೀಕರು ಹಾಗೂ ಕೆಲಸಗಾರು ಪರದಾಡುವಂತಾಗಿದೆ. ಈ ಹಿನ್ನಲೆಯಲ್ಲಿ ಇದೀಗ ಬಿಜೆಪಿಯ ಹೊನ್ನಾಳಿಯ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಮರಳಿಗಾಗಿ ನ್ಯಾಮತಿ ತಾಲೂಕು ಕಚೇರಿ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.


ಕಳೆದ ಸೋಮವಾರ ಶಾಸಕ ರೇಣುಕಾಚಾರ್ಯ ಅವರು ತುಂಗಾಭದ್ರಾ ನದಿಗೆ ಇಳಿದು ಸುತ್ತಮುತ್ತಲಿನ ನೂರಾರು ಎತ್ತಿನಗಾಡಿಗಳಲ್ಲಿ ಮರಳು ತುಂಬಿಸಿದ್ದ ಕಾರಣ ರೇಣುಕಾಚಾರ್ಯ ಸೇರಿ ಮೂವರು ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.


ಇದೀಗ ಈ ಬಗ್ಗೆ ಮತ್ತೆ ಪ್ರತಿಭಟನೆ ಆರಂಭಿಸಿರುವ ಶಾಸಕ ರೇಣುಕಾಚಾರ್ಯ, ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕುಗಳಿಗೆ ಸಮರ್ಪಕವಾಗಿ ಮರಳನ್ನು ಕೊಡಬೇಕು ಎಂದು ಆಗ್ರಹಿಸಿ ನ್ಯಾಮತಿ ತಾಲೂಕು ಕಚೇರಿ ಎದುರು ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments