Webdunia - Bharat's app for daily news and videos

Install App

ಜೂನ್ 30 ರೊಳಗೆ ಶಾಸಕರು ಆಸ್ತಿಯ ವಿವರ ಸಲ್ಲಿಸುವುದು ಕಡ್ಡಾಯ: ಲೋಕಾಯುಕ್ತ

Webdunia
ಮಂಗಳವಾರ, 14 ಮಾರ್ಚ್ 2017 (19:05 IST)
ಶಾಸಕರು ಜೂನ್ 30 ರೊಳಗೆ ತಮ್ಮ ಆಸ್ತಿಯ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಹೇಳಿದ್ದಾರೆ. 
ನಾನು ಲೋಕಾಯುಕ್ತರಾಗಿ ಒಂದುವರೆ ತಿಂಗಳುಗಳು ಕಳೆದಿವೆ. ನನ್ನ ಅಧಿಕಾರದ ವ್ಯಾಪ್ತಿಯಲ್ಲಿ ಮಾಡಲು ತುಂಬಾ ಕೆಲಸವಿದೆ. ಹೆಚ್ಚಿನ ಅಧಿಕಾರ ಬೇಕಾದಲ್ಲಿ ರಾಜ್ಯ ಸರಕಾರಕ್ಕೆ ಪತ್ರ ಬರೆದು ಮಾತುಕತೆ ನಡೆಸುತ್ತೇನೆ ಎಂದು ಹೇಳಿದ್ದಾರೆ.
 
ಎಲ್ಲಾ ಶಾಸಕರು ತಮ್ಮ ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕು. ಆಸ್ತಿ ವಿವರ ಸಲ್ಲಿಸುವಲ್ಲಿ ವಿಫಲವಾದ ಶಾಸಕರ ವಿವರಗಳನ್ನು ರಾಜ್ಯಪಾಲರಿಗೆ ರವಾನಿಸಲಾಗುವುದು. ಮುಂದಿನ 10 ದಿನಗಳೊಳಗಾಗಿ ಶಾಸಕರು ಆಸ್ತಿ ವಿವರಗಳನ್ನು ಸಲ್ಲಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. 
 
ಆಸ್ತಿ ವಿವರ ಸಲ್ಲಿಸದ ಶಾಸಕರಿಗೆ ನೋಟಿಸ್ ಜಾರಿ ಮಾಡಿ,  ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments