Webdunia - Bharat's app for daily news and videos

Install App

ಮತ್ತೆ ಮರಾಠಿ ಭಾಷಣದಲ್ಲಿ ಸದ್ದು ಮಾಡಿದ ಶಾಸಕ ಸಂಭಾಜಿ ಪಾಟೀಲ್...?!

Webdunia
ಶನಿವಾರ, 28 ಮಾರ್ಚ್ 2015 (14:10 IST)
ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಲ್ಲಿ ನಡೆಯುತ್ತಿರುವ ಯುವಜನೋತ್ಸವದಲ್ಲಿ ಕನ್ನಡದ ಬದಲು ಮರಾಠಿ ಭಾಷಣ ಮಾಡಲು ಯತ್ನಿಸಿದ ಶಾಸಕರ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.  
 
ಕನ್ನಡದ ಬದಲು ಮರಾಠಿ ಭಾಷಣಕ್ಕೆ ಮುಂದಾದವರು ಎಂಇಎಸ್ ಪಕ್ಷದ ಶಾಸಕ ಸಂಭಾಜಿ ಪಾಟೀಲ್. ಇವರು ಬೆಳಗಾವಿ ನಗರದ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. 
 
 ಈ ವೇಳೆ ಮರಾಠಿಯಲ್ಲಿ ಮಾತನಾಡಲು ಶಾಸಕರು ಯತ್ನಿಸಿದರು. ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕನ್ನಡದಲ್ಲಿ ಬಾಷಣ ಮಾಡುವಂತೆ ಪ್ರತಿಭಟನೆಗಿಳಿದು ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಕನ್ನಡದಲ್ಲಿಯೇ ಮಾತನಾಡಿದ ಸಂಭಾಜಿ ಪಾಟೀಲ್ ನಾನು ಕನ್ನಡದಲ್ಲಿ ಮಾತನಾಡಿದರೆ ನೀವು ಮಾತನಾಡುವ ಕನ್ನಡವೂ ಮರೆತುಹೋಗುತ್ತದೆ. ಈ ಹಿನ್ನೆಲೆಯಲ್ಲಿ ಮರಾಠಿ ಮಾತನಾಡುತ್ತಿದ್ದೇನೆ ಎಂದರು. ಬಳಿಕ ಕನ್ನಡದಲ್ಲಿಯೇ ತಮ್ಮ ಬಾಷಣವನ್ನು ಮುಗಿಸಿದರು. 
 
ಇನ್ನು ಈ ಯುವಜನೋತ್ಸವ ಕಾರ್ಯಕ್ರಮವು ನಾಲ್ಕು ದಿನಗಳ ಕಾಲ ನಡೆಯಲಿದ್ದು, ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರು ಉದ್ಘಾಟಿಸುವ ಮೂಲಕ ಚಾಲನೆ ನೀಡಿದರು. 
 
ಕಾರ್ಯಕ್ರಮದಲ್ಲಿ ವಿವಿಯ ಕುಲಪತಿ ಎಸ್.ಮಹೇಶಪ್ಪ, ವಿವಿಯ ವಿವಿಧ ಕಾಲೇಜುಗಳ ಬೋದಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿವಿಯ ಸಾಕಷ್ಟು ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments