ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗನಿಂದ ಶಾಸಕ ಸತೀಶ್ ಜಾರಕಿಹೊಳಿ‌ ಬೆಂಬಲಿಗನ ಹತ್ಯೆಗೆ ಯತ್ನ?

Webdunia
ಶುಕ್ರವಾರ, 28 ಸೆಪ್ಟಂಬರ್ 2018 (14:45 IST)
ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗನಿಂದ ಶಾಸಕ ಸತೀಶ್ ಜಾರಕಿಹೊಳಿ‌ ಬೆಂಬಲಿಗನ ಹತ್ಯೆಗೆ ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಬೆಳಗಾವಿ ತಾಲ್ಲೂಕಿನ ಮಾರಿಹಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶಾಸಕ ಸತೀಶ್ ಬೆಂಬಲಿಗ  ಆಸೀಪ್  ಮುಲ್ಲಾ ಮೇಲೆ ಹೆಬ್ಬಾಳಕರ್ ರ ಬೆಂಬಲಿಗ ತೌಶೀಪ್ ಫಣಿಬಂಧ ಎಂಬಾತನೆ  ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ.  ಇವರಿಬ್ಬರೂ ದೂರದ ಸಂಬಂಧಿಗಳಾಗಿದ್ದು,  ಸಂಜೆ ಅದೇ ಗ್ರಾಮದ ಬೇರೊಬ್ಬರ ಶವಸಂಸ್ಕಾರಕ್ಕೆ ಹೋದಾಗ ಇಬ್ಬರ ಮಧ್ಯೆ ಜಗಳವಾಗಿದೆ. ಆಗ  ತೌಶೀಪ್ ತಲ್ವಾರ್ ನಿಂದ ಹಲ್ಲೆ ನಡೆಸಿದ್ದಾನೆ ಎಂದು ಆಶೀಪ್ ಆರೋಪಿಸಿದ್ದು, ಹಿಂದಿನಿಂದ ಬಂದು ಹಲ್ಲೆ ಮಾಡಲು ಮುಂದಾದಾಗ ತಪ್ಪಿಸಿಕೊಳ್ಳಲು ಹೋಗಿ ಎಡಗೈನ ಮೂರು ಬೆರಳುಗಳಿಗೆ ಮತ್ತು ತಲೆಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಗಾಯಗೊಂಡ ಆಶೀಪನನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆಶೀಪ್ ಆರೋಗ್ಯವಾಗಿದ್ದಾನೆ.

ಹಲ್ಲೆ‌ ಮಾಡಿದ ತೌಶೀಪ್  ಪರಾರಿಯಾಗಿದ್ದಾನೆ. ಇವರಿಬ್ಬರು ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದು. ತೌಶೀಪ್ ಮಾರಿಹಾಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನಾಗಿದ್ದಾನೆ. ತೌಶೀಪ್ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮತ್ತು ಸಚಿವ ರಮೇಶ ಜಾರಕಿಹೊಳಿ ಪರಮಾಪ್ತನು ಹೌದು. ಅಸಲಿಯಾಗಿ ಆಶೀಪ್ ಮೋಹರಂ ಹಬ್ಬದಂದು ಮಾರಿಹಾಳ ಗ್ರಾಮದಲ್ಲಿ ಕವಾಲಿ ಕಾರ್ಯಕ್ರಮ ಏರ್ಪಡಿಸಿರುತ್ತಾನೆ. ಆಗ ಗ್ರಾಮದಲ್ಲಿ ಹಾಕಿದ್ದ ಬ್ಯಾನರಗಳ ವಿಚಾರವಾಗಿ ಇಬ್ಬರ ಮಧ್ಯೆ ಜಗಳವಾಗಿರುತ್ತದೆ. ಈ ಕುರಿತು ಮಾರಿಹಾಳ ಪೊಲೀಸ್ ಠಾಣೆಯಲ್ಲಿ 307 ಕೇಸ್ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ವಿಳಂಬವಿಲ್ಲ, ನಿರ್ಲಕ್ಷ್ಯವಿಲ್ಲ, ಸಾಬೂಬುಗಳನ್ನು ಹೇಳಲಿಲ್ಲ

ಕಾಂಗ್ರೆಸ್ ಸಮಾವೇಶದಲ್ಲಿ ಮೋದಿ ಸಮಾಧಿ ಬಗ್ಗೆ ಮಾತು: ಸಂಸತ್ ನಲ್ಲಿ ಸೋನಿಯಾ ಕ್ಷಮೆಗೆ ಬಿಜೆಪಿ ಪಟ್ಟು

ವಿಚಾರಣೆ ಬಿಟ್ಟು ದೆಹಲಿಯಿಂದ ತುರ್ತಾಗಿ ರಾಜ್ಯಕ್ಕೆ ವಾಪಾಸ್ಸಾದ ಡಿಕೆ ಶಿವಕುಮಾರ್, ಕಾರಣ ಗೊತ್ತಾ

ಮುಂದಿನ ಸುದ್ದಿ
Show comments