ನನ್ನ ಕೊಂಡೊಕೊಳ್ಳುವ ಶಕ್ತಿ ಬಿಜೆಪಿಗೆ ಇಲ್ಲ ಎಂದ ಶಾಸಕ!

Webdunia
ಬುಧವಾರ, 13 ಫೆಬ್ರವರಿ 2019 (14:35 IST)
ಬಿಜೆಪಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದಾರೆ ಎನ್ನಲಾಗಿದ್ದ ಜೆಡಿಎಸ್ ಶಾಸಕ ಬೆಂಗಳೂರಿಗೆ ಆಗಮಿಸಿದ್ದಾರೆ. ನನ್ನ ಕೊಂಡುಕೊಳ್ಳುವ ತಾಕತ್ತು ಬಿಜೆಪಿಯವರಿಗೆ ಇಲ್ಲ ಎಂದು ಹೇಳಿದ್ದಾರೆ.

ಶಾಸಕ ನಾರಾಯಣಗೌಡ ತಡರಾತ್ರಿ ಮುಂಬೈನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ರಾತ್ರಿ 1.10 ರ ಸುಮಾರಿಗೆ ಆಗಮಿಸಿದ ಕೆ.ಆರ್ ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡರನ್ನ ಸಚಿವ ಸಾ.ರಾ. ಮಹೇಶ್, ಶಾಸಕ ಶಿವಲಿಂಗೇಗೌಡ ಬರಮಾಡಿಕೊಂಡರು. ಈ ವೇಳೆ ಕೆಂಪೇಗೌಡ ಏರ್ಪೋಟ್ ನಲ್ಲಿ ಮಾತನಾಡಿದ ಶಾಸಕ ನಾರಾಯಣಗೌಡ, ನಾನು ಅನಾರೋಗ್ಯದ ‌ನಿಮಿತ್ಯ ಮುಂಬೈ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ.

ಯಾವದೇ ಅಪರೇಷನ್ ಕಮಲಕ್ಕೆ ಒಳಗಾಗಿಲ್ಲ ಎಂದರು. ಜತೆಗೆ ನನಗೆ ಬಿಜೆಪಿಯವರು ಸಿಎಂ ಮಾಡ್ತೀನಿ ಅಂದ್ರು ನಾನು ಬಿಜೆಪಿಗೆ ಹೋಗಲ್ಲ. ನನ್ನನ್ನು ಕೊಂಡುಕೊಳ್ಳುವ ತಾಕತ್ತು ಬಿಜೆಪಿಯವರಿಗಿಲ್ಲ. ನನಗೆ ಬಿಜೆಪಿಯ ಹತ್ತು ಜನ ಶಾಸಕರನ್ನ ಕರೆತರುವ ಕೆಪಾಸಿಟಿ ಇದೆ ಅಂತಾ ಇದೇ ವೇಳೆ ತಿಳಿಸಿದರು.

ಇನ್ನೂ ನನ್ನ ಎಲ್ಲಾ ವ್ಯವಹಾರಗಳು ಮುಂಬೈನಲ್ಲಿರುವ ಕಾರಣ ಮುಂಬೈಗೂ ನನಗೂ ನಂಟಿದೆ. ನಾನು ಮುಂಬೈನಲ್ಲಿದ್ದರೂ ಕುಮಾರಣ್ಣನ ಸಂಪರ್ಕದಲ್ಲಿದ್ದೆ ಅಂತಾ ಶಾಸಕ ನಾರಾಯಣಗೌಡ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಶಿವಕುಮಾರ್‌ ಊಟ, ತಿಂಡಿ ಮಾಡಿಕೊಂಡೇ ಎರಡೂವರೆ ವರ್ಷ ಕಳೆದ್ರು: ಶ್ರೀರಾಮುಲು ವ್ಯಂಗ್ಯ

ಬಾಲಕಿಗೆ ಲೈಂಗಿಕ ಕಿರುಕುಳ ಕೇಸ್: ಬಿಎಸ್ ಯಡಿಯೂರಪ್ಪ ಕೇಸ್ ಗೆ ಮಹತ್ವದ ಆದೇಶ ಕೊಟ್ಟ ಸುಪ್ರೀಂಕೋರ್ಟ್

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments