Publish Date: Tue, 17 Oct 2017 (15:22 IST)
Updated Date: Tue, 17 Oct 2017 (15:24 IST)
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನಿಂದನೆ ಪ್ರಕರಣ ಕುರಿತಂತೆ ಜೆಡಿಎಸ್ ಶಾಸಕ ಸುಧಾಕರ್ ಲಾಲ್ ಕ್ಷಮೆಯಾಚಿಸಿದ್ದಾರೆ.
ಪುತ್ರ ಸುಚರಿತ್ಗೆ ತಾನು ಮಾಡಿದ ತಪ್ಪಿನ ಅರಿವಾಗಿದೆ. ಪರಮೇಶ್ವರ್ ಅವರ ಬಗ್ಗೆ ತುಂಬಾ ಗೌರವವಿದೆ. ತಪ್ಪಿಗಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದ್ದಾರೆ.
ನನ್ನ ಮಗ ತಿಳಿಯದೇ ಇಂತಹ ಕಮೆಂಟ್ ಮಾಡಿದ್ದಾನೆ. ಅವನ ತಪ್ಪನ್ನು ಕ್ಷಮಿಸಿ ಎಂದು ಶಾಸಕ ಸುಧಾಕರ್ ಲಾಲ್ ಕೋರಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರ ಬಗ್ಗೆ ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಜೆಡಿಎಸ್ ಶಾಸಕ ಸುಧಾಕರ್ ಲಾಲ್ ಪುತ್ರ ಸುಚರಿತ್, ಕಮೆಂಟ್ ಮಾಡಿರುವುದು ವಿವಾದಕ್ಕೆ ಕಾರಣವಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.